
ಉದಯವಾಹಿನಿ ಕುಶಾಲನಗರ :-ಕೊಡಗು ಜಿಲ್ಲಾ ಮಡಿಕೇರಿ ನಗರ ವ್ಯಾಪ್ತಿಯ ಎಲ್ಲಾ ಆಹಾರ ವಸ್ತುಗಳ/ ಪದಾರ್ಥಗಳ ಉತ್ಪಾದಕರು, ಪ್ಯಾಕರ್ಗಳು, ಸಾಗಣಿದಾರರು, ಸಗಟು/ ಚಿಲ್ಲರೆ ಮಾರಾಟಗಾರರು, ವಿತರಕರು, ಹೋಟೆಲ್ ರೆಸಾರ್ಟ್, ಕ್ಯಾಂಟೀನ್, ಸಂಚಾರಿ ಸಿದ್ಧಪಡಿಸಿದ ಆಹಾರ ಮಾರಾಟಗಾರರು, ವೈನ್ಸ್ಟೋರ್, ಕ್ಲಬ್ಗಳು, ಬಾರ್ ಅಂಡ್ ರೆಸ್ಟೋರೆಂಟ್ಗಳು, ಹೋಮ್ಸ್ಟೇ ಗಳು, ಬೇಕರಿ, ಸಿಹಿತಿಂಡಿ, ಹಾಲು, ಹಾಲಿನ ಉತ್ಪನ್ನ, ಪ್ಯಾಕೇಜ್ಡ್ ಕುಡಿಯುವ ನೀರು ಘಟಕ/ ಮಾರಾಟಗಾರರು, ಹಣ್ಣು, ತರಕಾರಿಗಳು, ಕೋಳಿ, ಮೀನು, ಮಾಂಸ ಮಾರಾಟ, ರಸ್ತೆ ಬದಿ ಆಹಾರ ಪದಾರ್ಥ ಮಾರಾಟ, ಉಗ್ರಾಣಗಳು, ಸಂಸ್ಕರಣ ಘಟಕಗಳು, ಹಾಗೂ ಎಲ್ಲಾ ರೀತಿಯ ಆಹಾರ ಪದಾರ್ಥ ವಹಿವಾಟುದಾರರಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದುಕೊಳ್ಳುವ ಬಗ್ಗೆ ತರಬೇತಿ ಕಾರ್ಯಗಾರವು ನಗರದ ಗಾಂಧಿ ಭವನದಲ್ಲಿ ನಡೆಯಿತು.ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಂಕಿತಾಧಿಕಾರಿ ಡಾ.ಅನಿಲ್ ಧಾವನ್ ಅವರು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದುಕೊಳ್ಳುವ ಬಗ್ಗೆ ಮಾಹಿತಿ ನೀಡಿದರು.ಚೇಂಬರ್ ಆಫ್ ಕಾಮರ್ಸ್ ಸಹಕಾರದಲ್ಲಿ ನಡೆದ ಕಾರ್ಯಗಾರದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಬಗ್ಗೆ ಹಲವು ಮಾಹಿತಿ ನೀಡಲಾಯಿತು.
ತರಬೇತಿಯಲ್ಲಿ ೫೨ ಆಹಾರ ಉದ್ದಿಮೆದಾರರು ಭಾಗವಹಿಸಿದ್ದರು, ಮಡಿಕೇರಿ ಅಧ್ಯಕ್ಷರಾದ ಧನಂಜಯ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ವಿಭಾಗದ ಯಶ್ವಂತ, ಹಿರಿಯ ಆಹಾರ ಸುರಕ್ಷತಾಧಿಕಾರಿ ಮಂಜುನಾಥ್ ಅವರು ಇದ್ದರು.ಇದೇ ರೀತಿ ಕುಶಾಲನಗರದ, ಬಿಜಿಟಿ ಹಾಲ್ನಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದುಕೊಳ್ಳುವ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಕುಶಾಲನಗರದಲ್ಲಿ ತರಬೇತಿಯಲ್ಲಿ ೪೨ ಆಹಾರ ಉದ್ದಿಮೆದಾರರು ಭಾಗವಹಿಸಿದ್ದರು. ಪೋಷಕಾಂಶ ನಾಶವಾಗದ ರೀತಿಯಲ್ಲಿ ಆಹಾರವನ್ನು ತಯಾರಿಸಬೇಕು. ತಯಾರಿಸಿದ ಆಹಾರವನ್ನು ನಿರ್ದಿಷ್ಟ ಅವಧಿಯಲ್ಲಿ ಮಾತ್ರ ಉಪಯೋಗಿಸಬೇಕು. ಪ್ಯಾಕ್ ಮಾಡಿದ ಆಹಾರ ವಸ್ತುಗಳ ಲೇಬಲ್ಗಳಲ್ಲಿ ಗ್ರಾಹಕರಿಗೆ ಅಗತ್ಯವಾಗಿ ನೀಡಲೇಬೇಕಾದ ಮಾಹಿತಿ ಇರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಂಕಿತಾಧಿಕಾರಿ ಡಾ.ಅನಿಲ್ ಧಾವನ್ ಅವರು ಮಾಹಿತಿ ನೀಡಿದರು.
