
ಉದಯವಾಹಿನಿ ಕುಶಾಲನಗರ:- ಕನ್ನಡ ಸಾಹಿತ್ಯ ಪರಿಷತ್ತಿನ ಕುಶಾಲನಗರ ತಾಲೂಕು ಘಟಕದ ಪದಗ್ರಹಣ ಸಮಾರಂಭವು ಸೆಪ್ಟೆಂಬರ್ 10ರಂದು ಕುಶಾಲನಗರದ ಕಲಾಭವನದಲ್ಲಿ ನಡೆಯಲಿದೆ ಎಂದು ಘಟಕದ ಅಧ್ಯಕ್ಷ ಕೆ ಎಸ್ ನಾಗೇಶ್ ತಿಳಿಸಿದ್ದಾರೆ. ಮಡಿಕೇರಿ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂದು ಮಧ್ಯಾಹ್ನ 3:00ಗಂಟೆಗೆ ಕುಶಾಲನಗರದಕಲಾಭವನದಲ್ಲಿ
ನಡೆಯಲಿರುವ ಕಾರ್ಯಕ್ರಮವನ್ನು ರಾಜ ವಂಶಸ್ಥ ಯದುವೀರ ಕೃಷ್ಣ ದತ್ತ ಚಾಮರಾಜ ಒಡೆಯ ಅವರು ಉದ್ಘಾಟಿಸಲಿದ್ದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಎಂಪಿ ಕೇಶವಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ಕನ್ನಡ ಸಾಹಿತ್ಯ ಪರಿಷತ್ ಗೌರವ ಸಲಹೆಗಾರ ಹಾಗೂ ಮಾಜಿ ಅಧ್ಯಕ್ಷ ಟಿ.ಪಿ ರಮೇಶ್ ಪಾಲ್ಗೊಳ್ಳಲಿದ್ದಾರೆ.ಸಭಾ ಕಾರ್ಯಕ್ರಮಕ್ಕೆ ಮೊದಲು ಕೊಪ್ಪ ಗೇಟ್ ಬಳಿಯಿಂದ ಯದುವೀರ ಒಡೆಯರವರಿಗೆ ಅದ್ದೂರಿ ಸ್ವಾಗತ ಕೋರಲಾಗುವುದು ಅಲ್ಲಿಂದ ಕಲಭವದವರೆಗೆ ಮೆರವಣಿಗೆ ಮೂಲಕ ವೇದಿಕೆಗೆ ಕರೆತರಲಾಗುವುದು ಎಂದರು ಕನ್ನಡ ಸಾಹಿತ್ಯ ಪರಿಷತ್ ಗೌರವ ಸಲಹೆಗಾರ ಹಾಗೂ ಮಾಜಿ ಅಧ್ಯಕ್ಷ ಟಿಪಿ ರಮೇಶ್ ಮಾತನಾಡಿ ಕುಶಾಲನಗರದ ಕಲಾಭವನದ ಕಾಮಗಾರಿ ಅಪೂರ್ಣಗೊಂಡಿದ್ದು ಈಗಾಗಲೇ ಶಾಸಕ ಡಾಕ್ಟರ್ ಮಂತರ್ ಗೌಡ ಅವರ ಗಮನ ಸೆಳೆಯಲಾಗಿದೆ ಕಟ್ಟಡ ಪೂರ್ಣಗೊಂಡ ನಂತರ ಮುಂದಿನ ದಿನಗಳಲ್ಲಿ ಕನ್ನಡ ಪರ ಕಾರ್ಯಕ್ರಮಗಳನ್ನು ಅಲ್ಲೇ ನಡೆಸಲಾಗುವುದು ಎಂದು ಹೇಳಿದರು ಕೊಡಗು ಜಿಲ್ಲೆಯಲ್ಲಿ ಕುಶಾಲನಗರ ಅತ್ಯಂತ ಬೆಳವಣಿಗೆ ಕಂಡ ತಾಲೂಕು ಆಗಿದ್ದು ಹಲವು ಕನ್ನಡಪರ ಕಾರ್ಯಕ್ರಮಗಳು ಈ ಭಾಗದಲ್ಲಿ ಹೆಚ್ಚು ನಡೆಯುತ್ತಿದೆ ಮುಂದಿನ ದಿನಗಳಲ್ಲಿ ಕಸಾಪ ದಿಂದ ಹೆಚ್ಚು ಹೆಚ್ಚು ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು ಗೋಷ್ಠಿಯಲ್ಲಿ ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಎಸ್.ಐ. ಮುನೀರ್ ಅಹ್ಮದ್ ಕುಶಾಲನಗರ ತಾಲೂಕು ಘಟಕದ ನಿರ್ದೇಶಕರುಗಳಾದ ಡಿ.ವಿ.ರಾಜೇಶ್ ಹಾಗೂ ಸೋಮಣ್ಣ ಉಪಸ್ಥಿತರಿದ್ದರು
