ಉದಯವಾಹಿನಿ, ಮುಂಬೈ : ದೇಶದಲ್ಲಿ ಭಾರೀ ರಾಜಕೀಯ ಗದ್ದಲಕ್ಕೆ ಕಾರಣವಾಗಿರುವ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಸನಾತನ ಧರ್ಮದ ಕುರಿತು ಹೇಳಿಕೆಯನ್ನು ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್ ಟೀಕಿಸಿದ್ದಾರೆ.
ಉದಯನಿಧಿ ಸ್ಟಾಲಿನ್ ಸಚಿವರಾಗಿದ್ದಾರೆ ಮತ್ತು ಅವರ ಹೇಳಿಕೆಯನ್ನು ಯಾರೂ ಬೆಂಬಲಿಸುವುದಿಲ್ಲ ಮತ್ತು ಅಂತಹ ಹೇಳಿಕೆಗಳನ್ನು ನೀಡುವುದನ್ನು ತಡೆಯಬೇಕು ಎಂದು ಹೇಳಿದ್ದಾರೆ.
ಸುದ್ದಿಗಾರೊಂದಿಗೆ ಮಾತನಾಡಿದ ಅವರು ಡಿಎಂಕೆಯ ದೃಷ್ಟಿಕೋನ ಅಥವಾ ಅವರ ವೈಯಕ್ತಿಕ ದೃಷ್ಟಿಕೋನವಾಗಿರಬಹುದು. ಸುಮಾರು 90 ಕೋಟಿ ಹಿಂದೂಗಳು ಈ ದೇಶದಲ್ಲಿ ವಾಸಿಸುತ್ತಿದ್ದಾರೆ ಮತ್ತು ಇತರ ಧರ್ಮದ ಜನರು ಸಹ ಈ ದೇಶದಲ್ಲಿ ವಾಸಿಸುತ್ತಿದ್ದಾರೆ. ಯಾವ ಧರ್ಮದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಸಾಧ್ಯವಿಲ್ಲ ಎಂದಿದ್ಧಾರೆ.
”ದೇಶದಲ್ಲಿ ಪರಿಸ್ಥಿತಿ ಹದಗೆಡಬಾರದು. ವಿರೋಧ ಪಕ್ಷಗಳ ಮೇಲೆ ದಾಳಿ ಮಾಡಲು ಬಿಜೆಪಿಯವರಿಗೆ ನಾವೇ ಮದ್ದುಗುಂಡು ಕೊಡಬಾರದು . ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್‍ಗೌರವಾನ್ವಿತ ನಾಯಕ. ಅವರು ಇಂತಹ ಸಮಸ್ಯೆಗೆ ಇತಿಶ್ರೀ ಹಾಡಬೇಕು ಎಂದಿದ್ದಾರೆ. `ಸನಾತನ ಧರ್ಮ’ದ ನಿರ್ಮೂಲನೆಗೆ ಕರೆ ನೀಡಿರುವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯು ದೇಶದಲ್ಲಿ ಭಾರೀ ರಾಜಕೀಯ ವಿವಾದ ಹುಟ್ಟುಹಾಕಿದೆ. ಡಿಎಂಕೆ ಸದಸ್ಯರಾಗಿರುವ ಇಂಡಿಯಾ ಮೈತ್ರಿಕೂಟವು ಹಿಂದೂ ಧರ್ಮವನ್ನು ಅವಮಾನಿಸಿದೆ ಎಂದು ಆರೋಪಿಸಿ ಬಿಜೆಪಿ ದಾಳಿ ನಡೆಸುತ್ತಿದೆ.

Leave a Reply

Your email address will not be published. Required fields are marked *

error: Content is protected !!