
ಉದಯವಾಹಿನಿ ಸಿಂಧನೂರು: ಕರ್ನಾಟಕ ಸರ್ಕಾರ, ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅಂತರರಾಷ್ಟ್ರೀಯ ಪ್ರಜಾಪ್ರಭುತ, ದಿನಾಚರಣೆಯನ್ನು ಸನ್ಮಾನ್ಯ ಮುಖ್ಯಮಂತ್ರಿಗಳು, ಸನ್ಮಾನ ಶ್ರೀ ಹೆಚ್.ಸಿ ಮಹಾದೇವಪ್ಪ ಸಚಿವರು, ಸಮಾಜ ಕಲ್ಯಾಣ ಇಲಾಖೆ ಹಾಗೂ ಸರ್ಕಾರದ ಎಲ್ಲಾ ಸಚಿವರುಗಳು, ಜನಪ್ರತಿನಿಧಿಗಳು, ಉನ್ನತ ಅಧಿಕಾರಿಗಳು, ಶಾಲಾ ವಿದ್ಯಾರ್ಥಿಗಳೊಂದಿಗೆ ದಿನಾಂಕ : 15.09.2023ರಂದು ಬೆಳಿಗ್ಗೆ, 10.00 ಗಂಟೆಗೆ ವಿಧಾನಸೌಧದ ಭವ್ಯ, ಮೆಟ್ಟಿಲುಗಳ ಮೇಲೆ ಸಂವಿಧಾನ ಪೀಠಿಕೆ ವಾಚನ ಮಾಡುವ ಕಾರ್ಯಕ್ರಮವನ್ನು ನೇರ ಪ್ರಸಾರವನ್ನು ಸಿಂಧನೂರು ನಗರ ಸಭೆ ಟೌನ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ. ಎಂದು ತಿಳಿಸಿದರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ವಿಜಯ್ ಎಸ್. ಕೆ. ಅವರು ಈ ಕಾರ್ಯಕ್ರಮವನ್ನು ತಾಲೂಕ ಆಡಳಿತ, ನಗರಸಭೆ, ತಾಲೂಕ ಪಂಚಾಯತಿ ಶಿಕ್ಷಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ, ಸಿಂಧನೂರು ಇವರ ಸಂಯುಕ್ತಾಶ್ರಯದಲಿ, ದಿನಾಂಕ : 15.09.2023ರಂದು ಬೆಳಿಗ್ಗೆ 09.30 ಗಂಟೆಗೆ ಹಿಂಧನೂರು ನಗರದ ಟೌನ್ ಹಾಲ್ ನಲ್ಲಿ ನೇರ ಪ್ರಸಾರದ ಕಾರ್ಯಕ್ರಮವನ್ನು ವೀಕ್ಷಣೆ ಮಾಡುವುದು ಹಾಗೂ ಸಂವಿಧಾನ ಪೀಠಿಕೆ ವಾಚನ ಮಾಡುವ ಮೂಲಕ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮವನ್ನು ಆಯೋಜಿಸಲಾಗಿರುತ್ತದೆ. ಆದುದರಿಂದ ತಾಲೂಕಿನ ಎಲ್ಲಾ ಜನಪ್ರತಿನಿಧಿಗಳು,ಎಲ್ಲಾ ಸಾರ್ವಜನಿಕರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ, ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪತ್ರಿಕೆ ಪ್ರಕಟಣೆ ಮೂಲಕ ಮನವಿ ಮಾಡಿದರು
