
ಉದಯವಾಹಿನಿ, ಸಿಂಧನೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೈಲಾ ಉಪವಿಧಿಗಳು-2022ರ ಕೆಲವು ಉಪವಿಧಿಗಳಿಗೆ ತಿದ್ದುಪಡಿ ತರಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸರ್ವಸದಸ್ಯರ ವಿಶೇಷ ಮಹಾಸಭೆಯನ್ನು ವಾಸ್ತವ/ ವರ್ಚುವಲ್ ವಿಧಾನದ ಮೂಲಕ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 1 ರಂದು ಕರೆಯಲಾಗಿದೆ.ಎಂದು ರಾಜ್ಯ ಜಂಟಿ ಕಾರ್ಯದರ್ಶಿ, ತಾಲ್ಲೂಕು ಅಧ್ಯಕ್ಷ ಚಂದ್ರಶೇಖರ ಹಿರೇಮಠ ತಿಳಿಸಿದ್ದಾರೆ.ಅವರು ಈ ಕುರಿತು ಹೇಳಿಕೆ ನೀಡಿ, ಅಂದು ಬೆಳಗ್ಗೆ 11ಗಂಟೆಗೆ ಕೊಪ್ಪಳದ ಹಿರೇಸಿಂದೋಗಿ ರಸ್ತೆಯ ಮಹಾವೀರ ಕಲ್ಯಾಣ ಮಂಟಪದಲ್ಲಿ ಸಭೆ ನಡೆಯಲಿದ್ದು, ರಾಯಚೂರು ಜಿಲ್ಲೆಯ ಸರ್ವ ಸದಸ್ಯರು ಭಾಗವಹಿಸಬೇಕೆಂದು ಪತ್ರಿಕೆ ಪ್ರಕಟಣೆ ಮೂಲಕ ಮನವಿ ಮಾಡಿಕೊಂಡಿರುವ ಅವರು, ಸಭೆಯಲ್ಲಿ ವರ್ಚುವಲ್ ವೇದಿಕೆ ಮೂಲಕ ಭಾಗವಹಿಸಲು ಸದಸ್ಯರಿಗೆ ಮುಕ್ತ ಅವಕಾಶ ಕಲ್ಪಿಸಲಾ ಗಿದ್ದು, https:// bit.ly/ksgea splgbm ಲಿಂಕ್ ಅನ್ನು ಬಳಸಿ ಸಭೆಯಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಘದ ಕಾರ್ಯದರ್ಶಿ ಭರತ್ ಕುಮಾರ ಮೊಬೈಲ್ ಸಂಖ್ಯೆ: 9901416325 ಸಂಪರ್ಕಿಸುವಂತೆ ಕೋರಿದ್ದಾರೆ.
