ಉದಯವಾಹಿನಿ, ನವದೆಹಲಿ : ವರ್ಷಾಂತ್ಯದಲ್ಲಿ ನಡೆಯಲಿರುವ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕೇಂದ್ರ ಸಚಿವರು, ಸಂಸದರೂ ಸೇರಿದಂತೆ ಹಿರಿಯ ನಾಯಕರನ್ನು ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ. ಮಧ್ಯಪ್ರದೇಶದಲ್ಲಿ, ಮೂರು ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್ ಮತ್ತು ಫಗ್ಗನ್ ಸಿಂಗ್ ಕುಲಸ್ತೆ ಹಾಗು ಪ್ರಹ್ಲಾದ್ ಸಿಂಗ್ ಪಟೇಲ್ ಹಾಗೂ ನಾಲ್ಕು ಸಂಸದರು ಸರ್ಧೆ ಮಾಡುತ್ತಿದ್ದಾರೆ. ರಾಜಸ್ತಾನದಲ್ಲಿ ಕೇಂದ್ರ ಜಲಶಕ್ತಿ ಸಚಿವ ಮತ್ತು ಜೋಧ್‌ಪುರ ಸಂಸದ ಗಜೇಂದ್ರ ಸಿಂಗ್ ಶೇಖಾವತ್, ಸಂಸದೀಯ ವ್ಯವಹಾರಗಳ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್, ರಾಜಸಮಂದ್ ಸಂಸದೆ ದಿಯಾ ಕುಮಾರಿ ಮತ್ತು ಜೈಪುರ (ಗ್ರಾಮೀಣ) ಸಂಸದ ರಾಜ್ಯವರ್ಧನ್ ರಾಥೋಡ್ ಅವರಿಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದೆ. ತೆಲಂಗಾಣದಲ್ಲಿ ಕೇಂದ್ರ ಸಚಿವ, ರಾಜ್ಯ ಮುಖ್ಯಸ್ಥ ಜಿ ಕಿಶನ್ ರೆಡ್ಡಿ ಸೇರಿದಂತೆ ನಾಲ್ವರು ಸಂಸದರು, ರಾಜ್ಯ ವಿಧಾನಸಭೆಯಲ್ಲಿ ಕಣಕ್ಕಿಳಿಯು ಸಾಧ್ಯತೆ ಇದೆ. ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಇಲ್ಲ: ಮುಂಬರುವ ಮಧ್ಯಪ್ರದೇಶ ಮತ್ತು ರಾಜಸ್ಥಾನ, ಛತ್ತೀಸ್‌ಗಢ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವರು ಸೇರಿದಂತೆ ಹಿರಿಯ ನಾಯಕರನ್ನು ಕಣಕ್ಕಿಳಿಸಿಸದರೂ , ಮುಖ್ಯಮಂತ್ರಿ ಅಭ್ಯರ್ಥಿಗಳನ್ನು ಬಿಂಬಿಸದಿರಲು ಪಕ್ಷ ನಿರ್ಧರಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ ವಿವಿಧ ರಾಜ್ಯಗಳಗಲ್ಲಿ ನಾಯಕರ ನಡುವಿನ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಬಿಂಬಿಸದಿರಲು ಬಿಜೆಪಿ ವರಿಷ್ಠರು ನಿರ್ಧರಿಸಿದ್ದು,ಚುನಾಯಿತ ಶಾಸಕರು ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಿದ್ದಾರೆ ಎಂಬ ಸಂದೇಶವನ್ನು ಬಿಜೆಪಿ ರವಾನಿಸಿದೆ.

Leave a Reply

Your email address will not be published. Required fields are marked *

error: Content is protected !!