
ಉದಯವಾಹಿನಿ ಇಂಡಿ: ಪಟ್ಟಣದ ಮಾಡಲ್ ಪಬ್ಲಿಕ್ ಶಾಲೆಯಲ್ಲಿ ಮಹಮ್ಮದಿಯಾ ನಾತ್ ಕಮಿಟಿ ವತಿಯಿಂದ ತಾಲೂಕಾ ಮಟ್ಟದಲ್ಲಿ ಪ್ರವಾದಿ ಅವರ ಕುರಿತು ರಸಪ್ರಶ್ನೆ ಹಾಗೂ ನಾತ್ ಪಠಣ ಕಾರ್ಯಕ್ರಮ ಜರುಗಿತು.ಮುಖ್ಯಅತಿಥಿಯಾಗಿ ಸೀರಾಜ ಜಂಖಾನಿ ಪ್ರವಾದಿ ಮಹಮ್ಮದ್ರ ಬಗ್ಗೆ ಅಪಪ್ರಚಾರವನ್ನು ಮಾಡುತ್ತಿದ್ದರು. ಅವರ ಬದುಕಿನದುದ್ದಕ್ಕೂ ಅಪಪ್ರಚಾರ ಮಾಡಿದ್ದರು. ಆದರೆ ಅವೆಲ್ಲವನ್ನೂ ಅವರು ಮಾನವೀಯ ಮೌಲ್ಯಗಳ ನೆಲೆಗಟ್ಟಿನ ಮೂಲಕ ಎದುರಿಸಿದರು ಎಂದು ಹೇಳಿದರು.ಮುಪ್ತಿ ಅಬ್ದುಲ್ ರಹೆಮಾನ ಅರಬ ಮಾತನಾಡಿ,ಮನುಷ್ಯ ಕುಲವೊಂದೇ ಎಂಬುದನ್ನು ಪ್ರವಾದಿಗಳು ಸಾರಿದರು. ಭಾರತದಂತಹ ದೇಶ ಮುನ್ನಡೆಸಲು ಎಲ್ಲರೂ ಜೊತೆಗೂಡಿದರೆ ಮಾತ್ರ ಸಾಧ್ಯ. ಭಾರತೀಯರು ಇದನ್ನು ಅರ್ಥೈಸಿಕೊಳ್ಳಬೇಕು ಎಂದು ಹೇಳಿದರು. ಮೌಲಾನಾ ಜಿಯಾವುಲಹಕ್ ಉಮರಿ ಮಾತನಾಡಿ, ಪ್ರವಾದಿಗಳ ಸಂದೇಶಗಳು ಜನರ ಮನಮುಟ್ಟಬೇಕಾಗಿದೆ. ಗುಡಿ-ಮಸೀದಿಗಳಿಗೆ ಸೀಮಿತಗೊಳಿಸಬೇಡಿ.ಪ್ರವಾದಿ ಅವರ ಸಂದೇಶ ಸಾರ್ವಕಾಲಿಕವಾದುದು ಎಂದು ಹೇಳಿದರು.ಇಲಿಯಾಸ ಬೋರಾಮಣಿ ಮಾತನಾಡಿ ,ಮನುಷ್ಯ ಸಮಾನತೆಯ ಮಾದರಿಯನ್ನು ಸಮಾಜಕ್ಕೆ ತೋರಿಸಿಕೊಟ್ಟರು.ಭಾರತೀಯ ಸಮಾಜಕ್ಕೆ ಅವರ ಸಂದೇಶ ಪ್ರಸ್ತುತ. ನಾವು ಪರರ ಹಿತ ಬಯಸುವವರಾಗಬೇಕು. ಪ್ರವಾದಿಗಳು ಮಾನವೀಯ ಬದುಕು ಸವೆಸಿದರು. ಅವರ ಜೀವನವೇ ನಮಗೆಲ್ಲ ದಾರಿದೀಪ. ದೇವನ ಸಂದೇಶ ಆಲಿಸಿ ಪಾಲಿಸಬೇಕು ಎಂದು ಹೇಳಿದರು.
ಮಹಮ್ಮದಿಯಾ ನಾತ್ ಕಮೀಟಿ ಜಿಲ್ಲಾ ಅಧ್ಯಕ್ಷ ಸೈಯದ್ ಮುಸ್ತಫಾ ಕಾದರಿ, ಜಹಾಂಗೀರ ಹಿಪ್ಪರಗಿ, ಅಬ್ದುಲನಬಿ ಜಮಾದಾರ, ಅಬ್ದುಲ ರಜಾಕ ಕೋಲಾರ, ಮೈನುದ್ದಿನ ಬೂದಿಹಾಳ, ಅಬುಬಕರ ಅಂಬಾರಖಾನೆ, ಪುರಸಭೆ ಸದಸ್ಯ ಅಯುಬ ಬಾಗವಾನ, ಅಬ್ದುಲಮಾಜಿದ ಸೌದಾಗರ, ಅತೀಕ ಶೇಖ್, ಬಶೀರ ಇನಾಮದಾರ, ರಫೀಕ ಜಂಬಗಿ, ಇಸಾಕ ಮುಲ್ಲಾ, ಹಸನ ಮುಜಾವರ, ಅಶಿಫ್ ಜಮಾದಾರ, ರಫೀಕ ಮುಲ್ಲಾ, ನಾಸೀರ ಇನಾಮದಾರ, ಮುಜೀಬ ಅಫಜಲಪೂರ, ಮುನ್ನಾ ಇಂಡಿಕರ, ಅಬ್ದುಲಾ ಪಾಟೇಲ ಸೇರಿದಂತೆ ಇತರರು ಇದ್ದರು.
