ಉದಯವಾಹಿನಿ, ಒಂದೇ ವೇದಿಕೆಯಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಮತ್ತು ಅಮೃತಧಾರೆ ಸೀರಿಯಲ್ ಖ್ಯಾತಿಯ ಛಾಯಾ ಸಿಂಗ್ ಕಾಣಿಸಿಕೊಂಡಿದ್ದಾರೆ. ಏನಿದು ಹೊಸ ವಿಷ್ಯ?
ಭೂಮಿಕಾ ಎಂದಾಕ್ಷಣ ಧಾರಾವಾಹಿ ಪ್ರಿಯರ ಕಣ್ಣಮುಂದೆ ಬರುವುದು ಅಮೃತಧಾರೆ ಸೀರಿಯಲ್ ನಾಯಕಿ. ವಯಸ್ಸಾದರೂ ಮದುವೆಯಾಗದೇ ಉಳಿದ ಮಧ್ಯಮ ಕುಟುಂಬದ ಹೆಣ್ಣುಮಗಳೊಬ್ಬಳು ಒತ್ತಾಯಪೂರ್ವಕವಾಗಿ ವಯಸ್ಸಾಗಿರುವ ಕೋಟ್ಯಧಿಪತಿ ಬಿಜಿನೆಸ್ಮೆನ್ ಜೊತೆ ಮದುವೆಯಾಗಿ ಸಂಸಾರದಲ್ಲಿ ಹೊಂದಿಕೊಳ್ಳಲು ಪರದಾಡುತ್ತಿರುವ ಪಾತ್ರ ಈ ಭೂಮಿಕಾಳದ್ದು. ಭೂಮಿಕಾ ಪಾತ್ರಕ್ಕೆ ಜೀವ ತುಂಬಿರೋ ನಟಿಯ ಅಸಲಿ ಹೆಸರು ಛಾಯಾ ಸಿಂಗ್. ಸಾಮಾಜಿಕ ಜಾಲತಾಣದಲ್ಲಿಯೂ ಆ್ಯಕ್ಟೀವ್ ಆಗಿರೋ ಛಾಯಾ ಸಿಂಗ್ ಆಗಾಗ್ಗೆ ಕೆಲವೊಂದು ರೀಲ್ಸ್ ಮಾಡುತ್ತಿರುತ್ತಾರೆ, ಕೆಲವೊಂದು ಮಾಹಿತಿ ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ಇದೀಗ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಜೊತೆಗೆ ಹೇಳಿರುವ ಡೈಲಾಗ್ ಒಂದು ಸೋಷಿಯಲ್ ಮೀಡಿಯಾದಲ್ಲಿ ಸಕತ್ ವೈರಲ್ ಆಗುತ್ತಿದೆ. ಇದನ್ನು ನೋಡಿ ಛಾಯಾ ಸಿಂಗ್ ಬೆಳ್ಳಿ ಪರದೆಯ ಮೇಲೆ ಮತ್ತೆ ಎಂಟ್ರಿ ಕೊಡಲಿದ್ದಾರಾ ಎನ್ನುವ ಪ್ರಶ್ನೆ ಏಳುತ್ತಿದೆ.
