ಉದಯವಾಹಿನಿ, ಬೆಂಗಳೂರು: ನಟಿ,  ರಾಷ್ಟ್ರೀಯ ಮಹಿಳಾ ಆಯೋಗದ (NCW) ಸದಸ್ಯೆ ಖುಷ್ಬೂ ಸುಂದರ್ ಗೆ ಕೇರಳದ ದೇಗುಲದಲ್ಲಿ ನಾರಿ ಪೂಜೆ ನೆರವೇರಿಸಲಾಗಿದೆ. ಕೇರಳದ ತ್ರಿಶೂರ್‌ನ ವಿಷ್ಣುಮಾಯಾ ದೇವಸ್ಥಾನದಲ್ಲಿ ಖುಷ್ಬೂ  ಸುಹಾಸಿನಿ ಪೂಜಾ ಎಂದು ಕರೆಯಲಾಗುವ ನಾರಿ ಪೂಜೆ ಇತ್ತೀಚೆಗೆ ನೆರವೇರಿಸಿರುವುದು ಗಮನ ಸೆಳೆದಿದೆ.  ದೇವಸ್ಥಾನದ ಆಚರಣೆಗಳ ಪ್ರಕಾರ ಪ್ರತಿ ವರ್ಷ ಒಬ್ಬ ಮಹಿಳೆ ಆಮಂತ್ರಿಸಿ ಶಾಸ್ತ್ರೋಕ್ತವಾಗಿ ಪಾದಪೂಜೆ ಮಾಡಿ ವಿಧಿವಿಧಾನಗಳಂತೆ ಪೂಜೆ ನೆರವೇರಿಸಲಾಗುತ್ತದೆ. ಪೂಜಾರಿಗಳು ಮಹಿಳೆಯನ್ನು ದೇವತೆಗೆ ಹೋಲಿಸಿ ಪೂಜೆ ಮಾಡುವುದು ಇಲ್ಲಿ ವಿಶೇಷ.  ಖುಷ್ಬೂ  ಪಾದಪೂಜೆ ಮಾಡಿ, ಮಾಲೆ ಹಾಕಿ ರೇಷ್ಮೆ ವಸ್ತ್ರಗಳನ್ನು ಅರ್ಪಿಸಿದ್ದಾರೆ. ವಿಷ್ಣುಮಾಯಾ ದೇವಸ್ಥಾನದವರು ನಾರಿಪೂಜೆಗೆ ಆಮಂತ್ರಿಸಿದ್ದು ನಿಜಕ್ಕೂ ನನ್ನ ಅದೃಷ್ಠ.  ನಾನು ವಿನೀತಳಾಗಿದ್ದೇನೆ. ಕೆಟ್ಟದನ್ನು ಅಳಿಸಿ ಒಳ್ಳೆಯದನ್ನು ಪಸರಿಸಲು ಹಾಗೂ ಶಾಂತಿ ನೆಲೆಸಲು ನಾನು ನಿರಂತರವಾಗಿ ಶ್ರಮಿಸುವೆ. ನಾರಿಪೂಜೆಯಿಂದ ಮನುಕುಲಕ್ಕೆ ಒಳ್ಳೆಯದಾಗಲಿ’ ಎಂದು ಬರೆದುಕೊಂಡಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!