ಉದಯವಾಹಿನಿ ದೇವರಹಿಪ್ಪರಗಿ: ಕೆಲ ಸಾಮಾಜಿಕ ಜಾಲತಾಣದಲ್ಲಿ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ ಎಂಬ ಸುದ್ದಿಯನ್ನು ಹರಿಬಿಡಲಾಗಿದೆ. ಇದು ಸುಳ್ಳು ಸುದ್ದಿಯಾಗಿದ್ದು, ಸುಳ್ಳು ವದಂತಿಯನ್ನು ಹಬ್ಬಿಸದಂತೆ ಪಟ್ಟಣದ ಅವುಗೇಶ್ವರ ತಪೋಧಾಮ ಶ್ರೀ ಶಿವಯೋಗಿ ಸ್ವಾಮೀಜಿಗಳು ಮನವಿ ಮಾಡಿದ್ದಾರೆ.
ರವಿವಾರದಂದು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿ ಸುದ್ದಿಗಾರರ ಜೊತೆ ಮಾತನಾಡಿ,ಆರೋಗ್ಯ ಸಮಸ್ಯೆಯಿಂದ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರ ಚಿಕಿತ್ಸೆಗೆ ತಿಮ್ಮಕ್ಕ ಸ್ಪಂದಿಸುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದ್ದು, ಎಲ್ಲರೊಟ್ಟಿಗೂ ಮಾತಾನಾಡುತ್ತಿದ್ದಾರೆ. ಶತಾಯುಷಿ ತಿಮ್ಮಕ್ಕ ಅವರು ಪ್ರೀತಿಯಿಂದ ಪೋಷಿಸಿ ನೆಟ್ಟ ಮರಗಳು ಇಂದು ಹೆಮ್ಮರವಾಗಿ ಬೆಳೆದು ನಿಂತಿವೆ. ಪರಿಸರದ ಉಳಿವಿಗಾಗಿ ಅವರ ಸೇವೆ ಶ್ಲಾಘನೀಯವಾಗಿದೆ. ಸುಳ್ಳು ವದಂತಿಗೆ ಕಿವಿ ಕೊಡಬೇಡಿ ಎಂದು ರಾಜ್ಯದ ಜನತೆಗೆ ತಿಳಿಸಿದರು.ಇದೇ ಸಂದರ್ಭದಲ್ಲಿ ಭಾಗೇಶ ಹೂಗಾರ ಸೇರಿದಂತೆ ಹಲವಾರು ಜನರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!