ಉದಯವಾಹಿನಿ,ಚಿಂಚೋಳಿ: ಪಟ್ಟಣದ ಚಂದಾಪೂರದ ತಹಸೀಲ್ ಅವರಣದಲ್ಲಿ ತಾಲ್ಲೂಕಾಡಳಿತ ವತಿಯಿಂದ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಅಧ್ಯಕ್ಷತೆಯಲ್ಲಿ ಉದಯವಾಹಿನಿ ಕನ್ನಡ ದಿನಪತ್ರಿಕೆಯ ವರದಿಗಾರ ಮಹೇಬೂಬಶಾ ಅಣವಾರ ಅವರ ಪತ್ರಿಕಾ ಮಾಧ್ಯಮ ಸೇವೆಯನ್ನು ಪರಿಗಣಿಸಿ ತಾಲ್ಲೂಕಾಡಳಿತ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ತಾಪಂ.ಇಓ ಶಂಕರ ರಾಠೋಡ್,ಗ್ರೇಡ್2 ತಹಸೀಲ್ದಾರ್ ವೆಂಕಟೇಶ ದುಗ್ಗನ್,ಮುಖ್ಯಾಧಿಕಾರಿ ಕಾಶಿನಾಥ ಧನ್ನಿ,ಟಿಹೆಚ್ಓ ಡಾ.ಮಹ್ಮುದ್ ಗಫಾರ್,ಸಮಾಜ ಕಲ್ಯಾಣ ಅಧಿಕಾರಿ ಪ್ರಭುಲಿಂಗ ಬುಳ್ಳಾ,ಶಿಕ್ಷಣಾಧಿಕಾರಿ ಹಣಮಂತ ರಾಠೋಡ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗುರುಪ್ರಸಾದ್ ಕವಿತಾಳ,ಮಲ್ಲಿಕಾರ್ಜುನ ಪಾಲಾಮೋರ್,ಅಶೋಕ ಹೂವಿನಭಾವಿ,ವಿವಿಧ ಸಂಘಟನೆಯ ಅಧ್ಯಕ್ಷರು ಅಧಿಕಾರಿಗಳು ಸಿಬ್ಬಂದಿಗಳು ರಾಜಕೀಯ ಪಕ್ಷಗಳ ಮುಖಂಡರು ಇದ್ದರು.

Leave a Reply

Your email address will not be published. Required fields are marked *

error: Content is protected !!