
ಉದಯವಾಹಿನಿ, ಬೆಂಗಳೂರು: ಜಾತಿ ನಿಂದನೆ ಆರೋಪದಡಿ ದಾಖಲಾಗಿದ್ದ ಪ್ರಕರಣದಲ್ಲಿ ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ಅವರನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದು ತನಿಖೆಯನ್ನು ಕೈಗೊಂಡಿದ್ದಾರೆ. ಗೂಂಡಾ ಕಾಯ್ದೆಯಡಿ ಬಂಧನವಾಗಿದ್ದ ಪುನೀತ್ ಕೆರೆಹಳ್ಳಿಯನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿತ್ತು. ಮತ್ತೊಂದು ಪ್ರಕರಣದಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿದೆ
ಜಾತಿ ನಿಂದನೆ ಮಾಡಿರುವ ಪುನೀತ್ ಕೆರೆಹಳ್ಳಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಭೈರಪ್ಪ ಹರೀಶ್ ಎಂಬುವರು ನೀಡಿದ ದೂರಿನ ಮೇರೆಗೆ ಸಂಪಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಜಾತಿ ನಿಂದನೆ, ಅವಾಚ್ಯ ಶಬ್ದಗಳ ಬಳಕೆ ಮಾಡಿದ ಆರೋಪದಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಹೀಗಾಗಿ ನ್ಯಾಯಾಲಯದ ಮುಂದೆ ಶನಿವಾರ ಪುನೀತ್ ಕೆರೆಹಳ್ಳಿಯನ್ನು ಸಂಪಿಗೆಹಳ್ಳಿ ಪೊಲೀಸರು ಹಾಜರುಪಡಿಸಲಿದ್ದಾರೆ.
