ಉದಯವಾಹಿನಿ, ಬೆಂಗಳೂರು: ರಾಜ್ಯದ ಬೊಕ್ಕಸ ಖಾಲಿಯಾಗಿದೆ. ಸರ್ಕಾರಿ ನೌಕರರಿಗೆ ವೇತನ ಪಾವತಿಸಲು ಸರ್ಕಾರದ ಬಳಿ ಹಣ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ದೂರಿದ್ದಾರೆ.
ಗ್ಯಾರಂಟಿ ಯೋಜನೆಗಳಿಗೆ, ಬರ ಎದುರಿಸಲು ಅಷ್ಟೇ ಏಕೆ ಸರ್ಕಾರಿ ನೌಕರರಿಗೆ ಸಂಬಳ ನೀಡಲು ಈ ಸರ್ಕಾರದ ಬಳಿ ಹಣ ಇಲ್ಲ. ಸರ್ಕಾರ ದಿವಾಳಿಯಾಗಿದೆ ಎಂದು ಟೀಕಿಸಿದರು.
ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಸರ್ಕಾರಿ ನೌಕರರ ೭ನೇ ವೇತನ ಆಯೋಗ ರಚಿಸಿ ಮಧ್ಯಂತರ ಪರಿಹಾರವನ್ನು ನೀಡಲಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಕುಂಟು ನೆಪ ಹೇಳಿ ವೇತನ ಆಯೋಗದ ಅವಧಿ ವಿಸ್ತರಿಸಿದೆ ಎಂದು ಹರಿಹಾಯ್ದರು.
ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಕರ್ನಾಟಕ ದೇಶದಲ್ಲೆ ಹೆಚ್ಚು ಅಭಿವೃದ್ಧಿ ಹೊಂದಿದ ರಾಜ್ಯವಾಗಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿ ಸ್ಥಗಿತಗೊಂಡಿದೆ. ಎಲ್ಲ ರಂಗಗಳಲ್ಲೂ ಕಾಂಗ್ರೆಸ್ ವಿಫಲವಾಗಿದೆ ಎಂದರು.

Leave a Reply

Your email address will not be published. Required fields are marked *

error: Content is protected !!