ಉದಯವಾಹಿನಿ, ಮೈಸೂರು: ನಂಜನಗೂಡಿನ ನಂಜುಂಡೇಶ್ವರ ಸ್ವಾಮಿ ದರ್ಶನ ಪಡೆದು ಬರುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ಮಹಿಳೆ ಕಪಿಲಾ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.
ಮಂಜುಳಾ (50) ಮೃತ ಮಹಿಳೆ. ನವೆಂಬರ್ 7ರಂದು ಮೈಸೂರಿನ ಸುಭಾಷ್ ನಗರದ ಮನೆಯಿಂದ ಹೊರಟ ಮಹಿಳೆ ನಂಜನಗೂಡಿಗೆ ತೆರಳಿ ನಂಜುಂಡೇಶ್ವರ ಸ್ವಾಮಿ ದರ್ಶನ ಪಡೆದು ಬರುವುದಾಗಿ ಹೇಳಿದ್ದರು.
ಮೂರು ದಿನಗಳಾದರೂ ಮಹಿಳೆ ವಾಪಾಸ್ ಆಗಿರಲಿಲ್ಲ.
ಮನೆಯವರು ಹುಡುಕಾಟ ನಡೆಸಿದ್ದರು. ಆದರೂ ಮಹಿಳೆ ಪತ್ತೆಯಾಗಿರಲಿಲ್ಲ. ಇಂದು ಕಪಿಲಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮಹಿಳೆ ಮಂಜುಳಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

error: Content is protected !!