ಉದಯವಾಹಿನಿ, ಬೆಂಗಳೂರು : ಚುನಾವಣಾ ರಾಜಕೀಯಕ್ಕೆ ಮಾಜಿ ಸಿಎಂ ಸದಾನಂದ ಗೌಡ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಮತ್ತೋರ್ವ ಸಂಸದ ಶ್ರೀನಿವಾಸ್ ಪ್ರಸಾದ್ ಕೂಡ ನಿವೃತ್ತಿ ಘೋಷಿಸಿದ್ದಾರೆ.ಚಾಮರಾಜನಗರ ಕ್ಷೇತ್ರದ ಸಂಸದರಾಗಿರುವ ವಿ ಶ್ರೀನಿವಾಸ್ ಪ್ರಸಾದ್ ಅವರು 2024 ರ ಮಾರ್ಚ್ 17 ರಂದು ದೊಡ್ಡ ಸಮಾವೇಶ ನಡೆಸಿ ಅಂದೇ ಅಧಿಕೃತವಾಗಿ ನಿವೃತ್ತಿ ಘೋಷಿಸುವುದಾಗಿ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ್ದ ವಿ. ಶ್ರೀನಿವಾಸ್ ಪ್ರಸಾದ್ ಇದು ನನ್ನ ಕೊನೆಯ ಚುನಾವಣೆ, ಇನ್ನು ಮುಂದೆ ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದರು.ಮಾರ್ಚ್ 17 ಕ್ಕೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ, ನಂತರ ನಾನು ಯಾವುದೇ ಪಕ್ಷದ ಪರವಾಗಿ ಪ್ರಚಾರ ಮಾಡುವುದಿಲ್ಲ ಎಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!