ಉದಯವಾಹಿನಿ, ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯಡಿ ವಿವಿಧ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಯೋಜನೆಯಡಿ 1.20 ಎಕರೆಯಿಂದ 5.00 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕೊಳವೆಬಾವಿ ಕೊರೆದು ಪಂಪ್ ಸೆಟ್ ಅಳವಡಿಸಿ, ವಿದ್ಯುದೀಕರಣಗೊಳಿಸಿ ನೀರಾವರಿ ಸೌಲಭ್ಯ ಕಲ್ಪಿಸಲಾಗುತ್ತದೆ.ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
1) ಪರಿಶಿಷ್ಟಜಾತಿ/ಪಂಗಡದವರಾಗಿದ್ದು, ಜಾತಿ ಪ್ರಮಾಣಪತ್ರ ಹೊಂದಿರಬೇಕು
2) ಆದಾಯ ಮಿತಿ ಗ್ರಾಮೀಣ ಪ್ರದೇಶದಲ್ಲಿ ರೂ1.5 ಲಕ್ಷ, ನಗರ ಪ್ರದೇಶದಲ್ಲಿ ರೂ.2.00 ಲಕ್ಷ
3) ಕನಿಷ್ಠ 21 ವರ್ಷ ವಯೋಮಾನ
4) ಸಣ್ಣಹಿಡುವಳಿದಾರರ ಪ್ರಮಾಣಪತ್ರ ಹಾಗೂ ಇತ್ತೀಚಿನ ಪಹಣಿ ಆದಾಯ ಪ್ರಮಾಣ ಪತ್ರ, ಕುಟು೦ಬದ ಪಡಿತರ ಚೀಟಿ, ಬ್ಯಾಂಕ್ ಪಾಸ್ ಬುಕ್ಆ ಸಕ್ತರು ನವೆಂಬರ್ 29 ರ ಒಳಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 9482300400 ಸಂಪರ್ಕಿಸಬಹುದಾಗಿದೆ.
