ಉದಯವಾಹಿನಿ,ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕವಾಗಿರುವ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಹಲವು ಪ್ರಮುಖ ನಾಯಕರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ, ಬಸವರಾಜ ಬೊಮ್ಮಾಯಿ ಅವರುಗಳನ್ನು ಭೇಟಿ ಮಾಡಿದರು.ಮೊದಲು ಬೆಳಗ್ಗೆ ಆರ್.ಟಿ.ನಗರದಲ್ಲಿರುವ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ತೆರಳಿದ ವಿಜಯೇಂದ್ರ ಆರೋಗ್ಯದ ವಿಚಾರಿಸಿದರು. ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ತಮ್ಮ ನಿವಾಸಕ್ಕೆ ಬಂದ ಅವರನ್ನು ಬೊಮ್ಮಾಯಿ ಆತ್ಮೀಯವಾಗಿ ಬರಮಾಡಿಕೊಂಡು ಕೆಲಕಾಲ ಉಭಯ ಕುಶಲೋಪರಿ ವಿಚಾರಿಸಿದರು. ಇತ್ತೀಚೆಗೆ ಬೊಮ್ಮಾಯಿ ಅವರು ತೆರೆದ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಇದರ ಜೊತೆಗೆ ಅಧ್ಯಕ್ಷರಾದ ಬಿವೈವಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಪಕ್ಷದ ಸಾರಥ್ಯ ವಹಿಸಿರುವ ತಮಗೆ ಎಲ್ಲ ರೀತಿಯಿಂದಲೂ ಮಾರ್ಗದರ್ಶನ, ಸಹಕಾರ ನೀಡವುದಾಗಿ ಬೊಮ್ಮಾಯಿ ಆಶ್ವಾಸನೆ ನೀಡಿದ್ದಾರೆ. ಆರ್‍ಟಿನಗರದಿಂದ ನೇರವಾಗಿ ವಿಜಯೇಂದ್ರ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.

 

Leave a Reply

Your email address will not be published. Required fields are marked *

error: Content is protected !!