ಉದಯವಾಹಿನಿ , ಬೆಂಗಳೂರು : ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ ಬೆನ್ನಲ್ಲೇ ಕಾಂಗ್ರೆಸ್ ಸೇರ್ಪಡೆ ವಿಚಾರದ ಕುರಿತು ಜಿ.ಟಿ. ದೇವೇಗೌಡ ಪ್ರತಿಕ್ರಿಯೆ ನೀಡಿದ್ದು, ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಹೋಗಲ್ಲ ಎಂದು ಹೇಳಿದ್ದಾರೆ. ಶಿವಕುಮಾರ್ ಅವರೇ ಬಂದು ನನ್ನನ್ನು ಭೇಟಿ ಮಾಡಿದ್ರು. ಭೇಟಿ ವೇಳೆ ಎಸ್.ಟಿ.ಸೋಮಶೇಖರ್ ಸೇರಿ ಹಲವರು ಇದ್ದರು. ಈ ಹಿಂದೆ ಪಕ್ಷಕ್ಕೆ ಕರೆದರೂ ಯಾಕೆ ಬರಲಿಲ್ಲ ಎಂದು ಹೇಳಿದರು. ಅದೃಷ್ಟ ಇರುವವರಿಗೆ ಅಧಿಕಾರ ಸಿಗುತ್ತೆ, ಇಲ್ಲಂದ್ರೆ ಸಿಗಲ್ಲ ಎಂದು ಹೇಳಿದ್ದೇನೆ ಎಂದರು.
ಕಾಂಗ್ರೆಸ್ ಪಕ್ಷ ಸೇರ್ಪಡೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಜಿ.ಟಿ.ದೇವೇಗೌಡರು, ನಾನು ಕಾಂಗ್ರೆಸ್ ಗೆ ಹೋಗುವ ಪರಿಸ್ಥಿತಿ ಇಲ್ಲ. ನಾನು ಕಾಂಗ್ರೆಸ್ ಗೆ ಬರಲ್ಲ. ಜೆಡಿಎಸ್ ನ 19 ಶಾಸಕರೂ ಒಟ್ಟಾಗಿ ಇದ್ದೇವೆ. ಯಾವುದೇ ರೀತಿಯಲ್ಲಿ ಜೆಡಿಎಸ್ ಪಕ್ಷವನ್ನು ಒಡೆಯುವ ಕೆಲಸ ಮಾಡಲ್ಲ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!