ಉದಯವಾಹಿನಿ, ಮುದ್ದೇಬಿಹಾಳ: ಕರ್ನಾಟಕದ ರಾಯಚೂರು ಜಿಲ್ಲೆ ಗಡಿ ಭಾಗದಲ್ಲಿರುವ ಆಂಧ್ರಪ್ರದೇಶದ ಮಂತ್ರಾಲಯದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಪಟ್ಟಣದ ನಿವಾಸಿ ವಿಶ್ವನಾಥ ಬಸನಗೌಡ ಬಿರಾದಾರ (ಹಳ್ಳೂರ) (35) ಸಾವನ್ನಪ್ಪಿದ್ದಾರೆ.ಕೆಲ ತಿಂಗಳಿಂದ ಮಂತ್ರಾಲಯದಲ್ಲೆ ಸಣ್ಣ ಪುಟ್ಟ ಉದ್ಯಮದಲ್ಲಿ ತೊಡಗಿದ್ದ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಮುದ್ದೇಬಿಹಾಳಕ್ಕೆ ಬರುವಾಗ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ರಾಯಚೂರು ಘಟಕದ ಬಸ್ಸಿಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಮೃತರಿಗೆ ತಾಯಿ, ಪತ್ನಿ, ಅಪಾರ ಬಂಧು ಬಳಗ ಇದ್ದಾರೆ. ಮಂತ್ರಾಲಯಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!