ಉದಯವಾಹಿನಿ, ಬೆಂಗಳೂರು : ದಲಿತರ ಬಗ್ಗೆ ಸಿಎಂ ಗೆ ಬಹಳ ಕಾಳಜಿಯಿದೆ ಎಂದು ಸಿಎಂ ಸಿದ್ದರಾಮಯ್ಯರನ್ನು ಬಿಜೆಪಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಹಾಡಿ ಹೊಗಳಿದ್ದಾರೆ.
ಬೋವಿ ಸಮಾಜದ ಕಾರ್ಯಕ್ರಮದಲ್ಲಿ ಮಾತನಾಡಿದ ಅರವಿಂದ ಲಿಂಬಾವಳಿ ‘ ನಮ್ಮ ಸಮಾಜ ಮತ್ತು ಲಂಬಾಣಿ ಸಮಾಜಕ್ಕೆ ಆಗಾಗ ಆತಂಕ ಉಂಟಾಗುತ್ತಿದೆ ಎಂದು ಅರವಿಂದ ಲಿಂಬಾವಳಿ ಹೇಳಿದರು.ಹಿಂದುಳಿದ, ದಲಿತರ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಅತ್ಯಂತ ಕಾಳಜಿ ಇದೆ. ದೇಶದಲ್ಲಿ ನರೇಂದ್ರ ಮೋದಿ, ಕರ್ನಾಟಕದಲ್ಲಿ ಸಿದ್ದರಾಮಯ್ಯ , ಇಬ್ಬರೂ ಹಿಂದುಳಿದವರಿಗೆ, ದಲಿತರಿಗೆ ನ್ಯಾಯ ಕೊಡುತ್ತಾರೆ ಎಂದು ಮಾಜಿ ಶಾಸಕ ಅರವಿಂದ ಲಿಂಬಾವಳಿ ಹೇಳಿದರು.
BJP ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರನ್ನ ನೇಮಕ ಮಾಡಿದ್ದು, ಬಿಜೆಪಿ ಪಾಳಯದಲ್ಲಿನ ಅಸಮಾಧಾನ ಹೆಚ್ಚಾಗಿದೆ. ಬಿಜೆಪಿಯ ಮಾಜಿ ಶಾಸಕ ಅರವಿಂದ ಲಿಂಬಾವಳಿ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ನಾಯಕರ ಮೇಲಿನ ಮುನಿಸಿನಿಂದಾಗಿ ಹಲವು ನಾಯಕರು ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಮುಂದಾಗಿದ್ದು, ಮಾಜಿ ಶಾಸಕ ಅರವಿಂದ ಲಿಂಬಾವಳಿ ಕಾಂಗ್ರೆಸ್ ಸೇರ್ಪಡೆಯಾಗುತ್ತಾರಾ ಎಂಬ ಚರ್ಚೆ ಹುಟ್ಟಿಕೊಂಡಿದೆ.

Leave a Reply

Your email address will not be published. Required fields are marked *

error: Content is protected !!