ಉದಯವಾಹಿನಿ, ಬೆಂಗಳೂರು: ಚಂಡಮಾರುತ ಹಿನ್ನೆಲೆ ನಿನ್ನೆಯಿಂದ ಜಿಟಿ ಜಿಟಿ ಮಳೆಯಾಗುತ್ತಿದ್ದುಮೋಡ ಕವಿದ ವಾತಾವರಣವಿದ್ದು ಬಲವಾದ ಗಾಳಿ ಬೀಸುತ್ತಿದ್ದು ಬೆಂಗಳೂರಿನಲ್ಲಿ ಭಾರಿ ಮಳೆ ನಿರೀಕ್ಷೆ ಮಾಡಲಾಗಿದೆ.ಉತ್ತರ ತಮಿಳುನಾಡು ಹಾಗೂ ದಕ್ಷಿಣ ಆಂಧ್ರ ಪ್ರದೇಶಕ್ಕೆ ಚಂಡಮಾರುತದ ಭೀತಿ ಎದುರಾಗಿದೆ. ಚಂಡಮಾರುತದ ಪರಿಣಾಮ ರಾಜ್ಯದ ಮೇಲೂ ಬೀಳಲಿದೆ. ರಾಜ್ಯದಲ್ಲೂ ಮಳೆಯಾಗಲಿದೆ. ಚಂಡಮಾರುತ ಅಬ್ಬರ ಜೋರಾಗಿರುವ ಕಾರಣ, ಹಲವು ಜಿಲ್ಲೆಗಳಲ್ಲಿ ಮಳೆ ಬೀಳುವ ಮುನ್ಸೂಚನೆ ಇದೆ. ಚಂಡಮಾರುತ ಅಬ್ಬರಕ್ಕೆ ವಾತಾವರಣ ಪೂರ್ತಿ ಬದಲಾಗುತ್ತಿದೆ,ದಾವಣಗೆರೆ, ರಾಮನಗರ, ಹಾಸನ, ಕೊಡಗು, ವಿಜಯನಗರ, ಶಿವಮೊಗ್ಗ, ಬಳ್ಳಾರಿ ವಿಜಯಪುರದಲ್ಲೂ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡಿನ ನಾಲ್ಕು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ನಾಲ್ಕು ಜಿಲ್ಲೆಗಳ ಶಾಲಾ ಕಾಲೇಜು ,ಸರ್ಕಾರಿ ಕಛೇರಿ ಸೇರಿದಂತೆ ,ಸಾರ್ವಜನಿಕ ರಜೆ ಘೋಷಣೆ ಮಾಡಲಾಗಿದೆ. ಈ ಚಂಡಮಾರುತದ ಎಫೆಕ್ಟ್ನಿಂದ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬಿ ಸಮುದ್ರ ಮೂಲಕ ೩೧೦ ಕಿಲೋ ಮೀಟರ್ ವೇಗದಲ್ಲಿ ತಮಿಳುನಾಡಿನ ಚೆನೈಗೆ ಪ್ರವೇಶ ಮಾಡಲಿರುವ ಚಂಡಮಾರುತ, ಬೇ ಆಫ್ ಬೆಂಗಾಲ್ ಸೌಥ್ ರೀಜನ್ನಲ್ಲಿ ಹಾದು ಹೋಗಲಿದೆ.ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಬೆಂಗಳೂರಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ.
