ಉದಯವಾಹಿನಿ,ಬೆಂಗಳೂರು:   ಕೆಲವೇ ದಿನಗಳಲ್ಲಿ ನಗರದ ಎಲ್ಲ ಮನೆಗಳಿಗೂ ಕಾವೇರಿ ನೀರು ಸರಬರಾಜಾಗುವ ಲಕ್ಷಣಗಳು ಗೋಚರಿಸುತ್ತಿವೆ. ಕಾವೇರಿ 5ನೇ ಹಂತದ ಯೋಜನೆ ಏಪ್ರಿಲ್ ನಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇರುವುದರಿಂದ ನಗರದ ಎಲ್ಲ ಮನೆಗಳಿಗೂ ಏಪ್ರಿಲ್ ನಿಂದ ಕಾವೇರಿ ನೀರು ಪೂರೈಕೆ ಮಾಡಲು ತೀರ್ಮಾನಿಸಲಾಗಿದೆ ಎಂದು ಬೆಂಗಳೂರು ಜಲ ಮಂಡಳಿ ಅಧ್ಯಕ್ಷ ರಾಮ್‍ಪ್ರಸಾತ್ ಮನೋಹರ್ ಭರವಸ ನೀಡಿದ್ದಾರೆ.
1,2,3,4 ಹಂತಗಳಲ್ಲಿ ನಗರದ ಜನರ ಕುಡಿಯುವ ನೀರಿನ ದಾಹ ನೀಗಿಸಲಾಗುತ್ತಿದ್ದು, ಐದನೇ ಹಂತದ ಕಾಮಗಾರಿ ಪೂರ್ಣಗೊಂಡ ಕೂಡಲೆ ಎಲ್ಲರಿಗೂ ಕಾವೇರಿ ನೀರು ಸರಬರಾಜು ಮಾಡುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ನಾಲ್ಕು ಹಂತದಿಂದ ಪ್ರತಿ ನಿತ್ಯ 135 ಕೋಟಿ ಲೀಟರ್ ನೀರು ನಗರಕ್ಕೆ ನೀರು ಪೂರೈಕೆಯಾಗುತ್ತಿದ್ದರೂ ನಗರದಲ್ಲಿ ನಿತ್ಯ 75 ಕೋಟಿ ಲೀಟರ್ ಕೊರತೆ ಕಂಡು ಬಂದಿದೆ. ನೀರಿನ ಕೊರತೆ ನೀಗಿಸಲು ಏಪ್ರಿಲ್ ನಿಂದ ಹೆಚ್ಚುವರಿ ವಾರ್ಷಿಕ 10 ಟಿಎಂಸಿ ನೀರು ಪಡೆದುಕೊಳ್ಳುವ ಕಾವೇರಿ 5 ನೇ ಹಂತದ ಯೋಜನೆಗೆ ಸಚಿವ ಸಂಪುಟದ ಅನುಮೋದನೆ ದೊರೆತಿದೆ.

Leave a Reply

Your email address will not be published. Required fields are marked *

error: Content is protected !!