ಉದಯವಾಹಿನಿ, ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸ್ವಪಕ್ಷದ ನಾಯಕರ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ. ಮಾಜಿ ಸಚಿವ ಮುರುಗೇಶ್ ನಿರಾಣಿ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧವೂ ಆರೋಪ ಮಾಡಿದ್ದಾರೆ.ಯತ್ನಾಳ್ ವಿರುದ್ಧ ಮುರುಗೇಶ್ ನಿರಾಣಿ ವಾಗ್ದಾಳಿ ವಿಚಾರವಾಗಿ ವಿಜಯಪುರದಲ್ಲಿ ಪ್ರತಿಕ್ರಿಯಿಸಿದ ಶಾಸಕ ಯತ್ನಾಳ್, ನಿರಾಣಿಯವರನ್ನು ಬೀದಿನಾಯಿ, ಹಂದಿ ಎಂದು ಜರಿದಿದ್ದಾರೆ.
ಕೆಲವೊಂದು ಬೀದಿನಾಯಿಗಳ ಬಗ್ಗೆ ನಾನು ಉತ್ತರ ಕೊಡಲ್ಲ. ಹಂದಿಗಳು ಹಾಗೇ ಒದರುತ್ತಾ ಹೋಗುತ್ತವೆ. ಹಂದಿಗಳ ಬಗ್ಗೆ ನೀವೆಲ್ಲಾ ಕೇಳಬೇಡಿ ಎಂದಿದ್ದಾರೆ.
ಅಲ್ಲಲ್ಲಿ ಕೆಲವೊಂದನ್ನು ವಿಜಯೇಂದ್ರ ಬಿಟ್ಟಿದ್ದಾರೆ. ಅವು ಮಾತಾಡುತ್ತವೆ. ನನ್ನ ಬಗ್ಗೆ ಟೀಕೆ ಮಾಡಲೆಂದೆ ವಿಜಯೇಂದ್ರ ಕೆಲವರನ್ನು ಬಿಟ್ಟಿದ್ದಾರೆ ಎಂದು ಬಿ.ವೈ.ವಿಜಯೇಂದ್ರ ವಿರುದ್ಧ ಯತ್ನಾಳ್ ನೇರ ಆರೋಪ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!