ಉದಯವಾಹಿನಿ, ನವದೆಹಲಿ: ನಿಗಮ ಮಂಡಳಿ ಅಧ್ಯಕ್ಷರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ.ನಿಗಮ ಮಂಡಳಿ ನೇಮಕಾತಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆ ಸಭೆ ನಡೆಸಿದ್ದು, ಹೈಕಮಾಂಡ್ ಸಮ್ಮತಿ ನೀಡಿದೆ ಎಂದು ತಿಳಿದುಬಂದಿದೆ.

ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅಳೆದು ತೂಗಿ ಪಟ್ಟಿ ಫೈನಲ್ ಮಾಡಿದ್ದಾರೆ. ಮೊದಲ ಹಂತದಲ್ಲಿ ಮೂರು ಬಾರಿ ಗೆದ್ದಿರುವ ಶಾಸಕರಿಗೆ ಸ್ಥಾನ ನೀಡುವ ನಿಟ್ಟಿನಲ್ಲಿ 32 ಶಾಸಕರ ಪಟ್ಟಿ ಸಿದ್ಧಪಡಿಸಿದ್ದಾರೆ. ಹೈಕಮಾಂಡ್ ನಾಯಕರಿಂದ ನಿಗಮ ಮಂಡಳಿ ಪಟ್ಟಿಗೆ ಇಂದೇ ಅಂಕಿತ ದೊರೆಯುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

error: Content is protected !!