ಉದಯವಾಹಿನಿ , ಬೆಂಗಳೂರು: ಶ್ರೀಸಾಯಿ ಪಾರ್ಟಿ ಹಾಲ್ ನಲ್ಲಿ ಶರವಣ ಚಾರಿಟೇಬಲ್ ಟ್ರಸ್ಟ್ ವತಿಯಿಂದ ೧೫ನೇ ವೈಕುಂಠ ಏಕಾದಶಿ ಅಂಗವಾಗಿ ಭಕ್ತರಿಗೆ ೧ಲಕ್ಷ ಲಡ್ಡು ವಿತರಣಾ ಕಾರ್ಯಕ್ರಮಕ್ಕೆ ವಿಶೇಷ ಪೂಜೆ ಸಲ್ಲಿಸಿ ವಿಧಾನಪರಿಷತ್ ಶಾಸಕರಾದ, ಶರವಣ ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕರಾದ ಟಿ.ಎ.ಶರವಣರವರು ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಟಿ.ಎ.ಶರವಣ ರವರು ಮಾತನಾಡಿ ವೈಕುಂಠ ಏಕಾದಶಿ ದಿನದಂದು ಮಹಾವಿಷ್ಣುವಿನ ವೈಕುಂಠ ಮಹಾದ್ವಾರ ತೆಗೆಯಲಾಗುತ್ತದೆ ಎಂದು ನಂಬಿಕೆ ಹಿಂದೂ ಧರ್ಮದಲ್ಲಿ ಇದೆ. ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕ ಎಂಬ ಬಿರುದಾಂಕಿತ ವೈಕುಂಠ ಏಕಾದಶಿಯಂದು ಶ್ರೀ ವೆಂಕಟೇಶ್ವರ ದರ್ಶನ ಪಡೆಯಬೇಕು, ತಿರುಮಲ ತಿರುಪತಿಗೆ ಹೋಗಬೇಕು , ಲಡ್ಡು ಪ್ರಸಾದ ಸ್ವೀಕರಿಸಬೇಕು ಎಂಬ ಬಯಕೆ ಭಕ್ತಿ, ಎಲ್ಲರಿಗೂ ಇರುತ್ತದೆ.ಎಲ್ಲರೂ ತಿರುಪತಿಗೆ ಹೋಗಲು ಸಾಧ್ಯವಿಲ್ಲ, ಮತ್ತು ತಿರುಪತಿ ಲಡ್ಡು ಮಾದರಿಯಲ್ಲಿ ೧೦೦ಬಾಣಸಿಗರ ಹಗಲುರಾತ್ರಿ ಏನ್ನದೇ ೧ಲಕ್ಷ ಲಡ್ಡು ತಯಾರಿಕೆಯಲ್ಲಿ ಮಗ್ನರಾಗಿದ್ದಾರೆ.
ಶುದ್ದ ತುಪ್ಪ, ಗೋಡಂಬಿ,ದಾಕ್ಷಿ,ಕಡಲೆಬೇಳೆ ಬಳಸಿ ತಿರುಪತಿಯ ಲಡ್ಡು ಮಾದರಿಯಲ್ಲಿ ತಯಾರಿಸಲಾಗಿದೆ. ಶ್ರೀ ವೆಂಕಟೇಶ್ವರ ದೇವಸ್ಥಾನಗಳಿಗೆ ಲಡ್ಡು ನೀಡಲಾಗುತ್ತದೆ ಬಂದ ಭಕ್ತರಿಗೆ ಲಡ್ಡು ಪ್ರಸಾದ ವಿತರಿಸಲಾಗುವುದು. ತಿರುಪತಿ ತಿಮ್ಮಪ್ಪ, ಗೋವಿಂದ, ಹರೇ ಶ್ರೀನಿವಾಸ, ವೆಂಕಟೇಶ್ವರ, ಏಳು ಬೆಟ್ಟದ ಒಡೆಯ ಭಕ್ತರು ಅವರವರ ಭಕ್ತಿಭಾವನೆಗೆ ಸ್ಮರಣೆ ಮಾಡುತ್ತಾರೆ.
