ಉದಯವಾಹಿನಿ, ಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನ ಚಳಿ ಹೆಚ್ಚಲಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಚಳಿಯ ಜತೆಗೆ ಮಳೆಯಾಗಲಿದೆ. ಆದರೆ ಮಳೆಯಾಗುವ ಸಾಧ್ಯತೆ ಕಡಿಮೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಗಲಿನಲ್ಲಿ ಸಾಕಷ್ಟು ಬಿಸಿಲು ಇರುತ್ತದೆ. ರಾತ್ರಿ ತುಂಬಾ ತಂಪಾಗಿರುತ್ತದೆ ಎಂದು ತಿಳಿದಿದೆ.
ಬೆಂಗಳೂರಿನಲ್ಲಿ ಏಕಾಏಕಿ ಹವಾಮಾನದಲ್ಲಿ ಕುಸಿತ ಕಂಡು ಬಂದು ಜನ ಚಳಿಯಿಂದ ನಡುಗುವಂತಾಗಿದೆ.
ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬೆಳಗ್ಗೆ ಬಿಸಿಲು, ರಾತ್ರಿ ಚಳಿ ಇರುತ್ತದೆ. ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನದ ಗುಡ್ಡಗಾಡು ಪ್ರದೇಶಗಳಲ್ಲೂ ಒಣ ಹವೆ ಇರುತ್ತದೆ. ಅದೇ ರೀತಿ ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಒಣಹವೆಯಾಗುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

error: Content is protected !!