ಉದಯವಾಹಿನಿ: ಬೆಂಗಳೂರು : ಹೊಸ ವರ್ಷಕ್ಕೆ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಡಿಸೆಂಬರ್ 31 ರ ಸಂಜೆ 6 ರಿಂದ ಜನವರಿ 1ರ ಬೆಳಗ್ಗೆ 6 ಗಂಟೆವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ರವೀಂದ್ರ ಮಾಹಿತಿ ನೀಡಿದ್ದಾರೆ.ನಂದಿ ಬೆಟ್ಟ ಒಂದು ಪುರಾತನ ಕಾಲದ ಕೋಟೆಯಾಗಿದ್ದು, ಇದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇರುವ ಗಿರಿಧಾಮವಾಗಿದೆ. ಚಿಕ್ಕಬಳ್ಳಾಪುರ ಪಟ್ಟಣದಿಂದ 10 ಕಿ.ಮಿ ದೂರದಲ್ಲಿ ಹಾಗು ಬೆಂಗಳೂರು ನಗರದಿಂದ ಸುಮಾರು 45 ಕಿ.ಮಿ ದೂರದಲ್ಲಿದೆ. ವೀಕೆಂಡ್ ಬಂದರೆ ಸಾಕು ನಂದಿಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ.

Leave a Reply

Your email address will not be published. Required fields are marked *

error: Content is protected !!