ಉದಯವಾಹಿನಿ, ಬೆಂಗಳೂರು : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಒಬ್ಬಳು ನಾನು ಯಾರಿಗೂ ಮೋಸ ಮಾಡಿಲ್ಲ ಎಂದು ಡೆತ್ ನೋಟ್ ಅಲ್ಲಿ ಸಂಪೂರ್ಣವಾಗಿ ವಿವರವಾಗಿ ಬರೆದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ತ್ಯಾಗರಾಜ ನಗರದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ ಜಾನ್ಸಿ ಎಂದು ಗುರುತಿಸಲಾಗಿದ್ದು, ದ್ವಿತೀಯ ಪಿಯುಸಿ ಅಧ್ಯಯನ ಮಾಡುತ್ತಿದ್ದಾಳೆ. ಆತ್ಮಹತ್ಯೆಗು ಮುನ್ನ ಡೆತ್ ನೋಟ್ ಅಲ್ಲಿ ಸಂಪೂರ್ಣವಾಗಿ ವಿವರ ಬರೆದಿಟ್ಟು ವಿದ್ಯಾರ್ಥಿನಿ ಜಾನ್ಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕಾಲೇಜಿನಿಂದ ಬಂದು ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ತ್ಯಾಗರಾಜನಗರದಲ್ಲಿ ಘಟನೆ ಸಂಭವಿಸಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ.ನಾನು ಯಾರಿಗೂ ಮೋಸ ಮಾಡಿಲ್ಲ ಎಂದು ಸಂಪೂರ್ಣವಾಗಿ ವಿವರ ಬರೆದು ಬುಜ್ಜಿ, ಆಲ್ ಫ್ರೆಂಡ್ಸ್ ಮಿಸ್ ಯು ಎಂದು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆ ಕುರಿತಂತೆ ದೊಡ್ಡಬಳ್ಳಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!