ಉದಯವಾಹಿನಿ ಬೆಂಗಳೂರು: ಎಎನ್ಐ ದಾಳಿ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಗಸ್ತು ಹೆಚ್ಚಳ, ಪ್ಯಾಟ್ರೋಲಿಂಗ್, ನಾಕಾಬಂದಿ ಸೇರಿದಂತೆ ಎಂಟು ಅಂಶಗಳನ್ನು ಪಾಲಿಸಲು ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಸೂಚಿಸಿದ್ದಾರೆ.ಈ ವೇಳೆ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದು ಹಾಗೂ ಪೋಸ್ಟ್ ಹಾಕದಂತೆ ನಿಗಾ ವಹಿಸಲಾಗುವುದು ಎಂದಿದ್ದಾರೆ.ಉಡುಪಿಯಲ್ಲಿ ಲಾಠಿ ಚಾರ್ಜ್ಎನ್ಐಎ ದಾಳಿ ಖಂಡಿಸಿ ಉಡುಪಿಯಲ್ಲಿ ಪಿಎಫ್ಐ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರ ಅನುಮತಿ ಪಡೆಯದೆ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರು. ರಸ್ತೆಯಿಂದ ಹೊರಹೋಗುವಂತೆ ಸೂಚನೆ ನೀಡಿದರೂ ಪ್ರತಿಭಟನೆ ಮುಂದುವರಿಸಿದ್ದಾರೆ. ಇದರಿಂದ ಸಂಚಾರ ವ್ಯವಸ್ಥೆ ಅಸ್ತವ್ಯಸ್ಥವಾಗಿತ್ತು.ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರಿಗೆ ಪೊಲೀಸರು ಲಾಠಿ ರುಚಿ ತೋರಿಸಿ ಗುಂಪು ಚದುರಿಸಿದ್ದಾರೆ. ಹಲವು ಪಿಎಫ್ಐ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ವಹಿಸಲಾಗಿದೆ. ಎನ್ಐಎ ಅಧಿಕಾರಿಗಳು ಕರ್ನಾಟಕದಿಂದ 7 ಜನರನ್ನು ಬಂಧಿಸಿದ್ದಾರೆ.