ಉದಯವಾಹಿನಿ, ಶಿವಮೊಗ್ಗ : ಕರ್ನಾಟಕ ಸರ್ಕಾರ ಆಯೋಜಿಸಿರುವ ಯುವನಿಧಿ ಯೋಜನೆ ಕಾರ್ಯಕ್ರಮವನ್ನು ನಗರದ ಫ್ರೀಡಂ ಪಾರ್ಕ್ನಲ್ಲಿ ಆಯೋಜಿಸಲಾಗಿದ್ದು, ಸಾರ್ವಜನಿಕರ ಹಿತದೃಷ್ಠಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ವಾಹನಗಳ ನಿಲುಗಡೆ ಹಾಗೂ ತಾತ್ಕಾಲಿಕವಾಗಿ ಈ ಕೆಳಕಂಡಂತೆ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಆದೇಶಿಸಿದ್ದಾರೆ.
ಸಾಗರ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಹೋಗುವ ಸಾರ್ವಜನಿಕ ವಾಹನಗಳು ಆಲ್ಕೊಳ ಸರ್ಕಲ್ ಗೋಪಾಳ ಸರ್ಕಲ್ ನ್ಯೂಮಂಡ್ಲಿ ಸರ್ಕಲ್ ಮಾರ್ಗವಾಗಿ ತೀರ್ಥಹಳ್ಳಿ ರಸ್ತೆಗೆ ಸೇರುವುದು. ತೀರ್ಥಹಳ್ಳಿ ರಸ್ತೆ ಕಡೆಯಿಂದ ಸಾಗರ ರಸ್ತೆ ಕಡೆಗೆ ಹೋಗುವ ಸಾರ್ವಜನಿಕ ವಾಹನಗಳು ನ್ಯೂಮಂಡ್ಲಿ ಸರ್ಕಲ್ ಗೋಪಾಳ ಸರ್ಕಲ್ ಆಲ್ಕೊಳ ಮಾರ್ಗವಾಗಿ ಸಾಗರ ರಸ್ತೆ ಬಂದು ಸೇರುವುದು. ಶಿವಮೊಗ್ಗದಿಂದ ಶಿಕಾರಿಪುರ, ನ್ಯಾಮತಿ ಸೊರಬ ಕಡೆ ಹೋಗುವ ಎಲ್ಲಾ ವಾಹನಗಳು ಆಯನೂರು ಹಾರ್ನಳ್ಳಿ ಸವಳಂಗ ಮಾರ್ಗವಾಗಿ ಚಲಿಸುವುದು. ಶಿಕಾರಿಪುರ ನ್ಯಾಮತಿ ಸೊರಬ ಕಡೆಯಿಂದ ಶಿವಮೊಗ್ಗಕ್ಕೆ ಬರುವ ಎಲ್ಲಾ ವಾಹನಗಳು ಸವಳಂಗ ಹಾರ್ನಳ್ಳಿ ಆಯನೂರು ಮಾರ್ಗವಾಗಿ ಶಿವಮೊಗ್ಗಕ್ಕೆ ಬರುವುದು. ಶಿವಮೊಗ್ಗ ನಗರದಿಂದ ಅಬ್ಬಲಗೆರೆ ಕೊಮ್ಮನಾಳ್ ಕುಂಚೇನಹಳ್ಳಿ ತಾಂಡಗಳಿಗೆ ಹೋಗುವ ಎಲ್ಲಾ ವಾಹನಗಳು ರಾಗಿಗುಡ್ಡ ಕುವೆಂಪು ನಗರದ ಮುಖಾಂತರ ಚಲಿಸುವುದು. ಅಬ್ಬಲಗೆರೆ ಕೊಮ್ಮನಾಳ್ ಕುಂಚೇನಹಳ್ಳಿ ತಾಂಡಗಳಿಂದ ಶಿವಮೊಗ್ಗ ನಗರಕ್ಕೆ ಬರುವ ಎಲ್ಲಾ ವಾಹನಗಳು ಕುವೆಂಪು ನಗರ ರಾಗಿಗುಡ್ಡ ಸಂಗೊಳ್ಳಿ ರಾಯಣ್ಣ ಸರ್ಕಲ್ ಮುಖಾಂತರ ಚಲಿಸುವುದು.

Leave a Reply

Your email address will not be published. Required fields are marked *

error: Content is protected !!