ಉದಯವಾಹಿನಿ, ಬೆಂಗಳೂರು: ರಾಜ್ಯದ ವಿವಿಧೆಡೆ ವಿಧ್ವಂಸಕ ಕೃತ್ಯ ಹಾಗೂ ಆತ್ಮಾಹುತಿ ದಾಳಿ ನಡೆಸಲು ಸಂಚು ರೂಪಿಸಿದ್ದ ಬಂಧಿತ ಲಷ್ಕರ್ ಎ ತೊಯ್ಬಾದ ೬ ಮಂದಿ ಶಂಕಿತ ಉಗ್ರರ ವಿರುದ್ಧ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದೆ.
ವಿಧ್ವಂಸಕ ಕೃತ್ಯ ಹಾಗೂ ಆತ್ಮಾಹುತಿ ದಾಳಿ ನಡೆಸಲು ಸಂಚು ರೂಪಿಸಿದ್ದ ೮ ಮಂದಿಯಲ್ಲಿ ೬ ಮಂದಿಯನ್ನು ಬಂಧಿಸಲಾಗಿದ್ದು, ಇನ್ನೂ ಇಬ್ಬರು ಉಗ್ರರು ತಲೆ ಮರೆಸಿಕೊಂಡಿದ್ದಾರೆ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.
ಪಾಕ್ ಮೂಲದ ಭಯೋತ್ಪಾದನಾ ಸಂಘಟನೆ ಲಷ್ಕರ್ ಎ ತೊಯ್ಬಾ ಜೊತೆ ನಂಟು ಹೊಂದಿ ಉಗ್ರವಾದಕ್ಕೆ ಪಿತೂರಿ, ಆತ್ಮಾಹುತಿ ದಾಳಿ ನಡೆಸಲು ಯೋಜನೆ ರೂಪಿಸಿರುವ ಆರೋಪವಿದೆ.
ಈ ಪ್ರಕರಣದ ಪ್ರಮುಖ ಆರೋಪಿ ಕೇರಳ ಮೂಲದ ನಸೀರ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ. ಇಬ್ಬರು ಉಗ್ರರಾದ ಜುನೈದ್ ಅಹ್ಮದ್ ಮತ್ತು ಸಲ್ಮಾನ್ ಖಾನ್ ವಿದೇಶದಲ್ಲಿ ತಲೆಮರೆಸಿ ಕೊಂಡಿದ್ದಾರೆ. ಇನ್ನು ಕಳೆದ ಜುಲೈ ೧೯ರಂದು ಬೆಂಗಳೂರಲ್ಲಿ ಬಂಧಿತರಾಗಿದ್ದ ಸೈಯದ್ ಸುಹೇಲ್ ಖಾನ್, ಮೊಹಮ್ಮದ್ ಉಮರ್, ಝಹೀದ್ ತಬ್ರೇಜ್, ಸೈಯದ್ ಮುದಾಸಿರ್ ಮತ್ತು ಫೈಸಲ್ ರಬ್ಬಾನಿ ಹೆಸರುಗಳನ್ನು ಚಾರ್ಜ್ ಶೀಟ್‌ನಲ್ಲಿದೆ. ಇವರೆಲ್ಲರ ವಿರುದ್ಧ ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ, ಸ್ಫೋಟಕಗಳ ಸಾಗಣೆ ಕಾಯ್ದೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!