ಉದಯವಾಹಿನಿ, ಬೆಂಗಳೂರು: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ ನೇಮಕಾತಿ ಪಡೆಯಲು ಶಿಫಾರಸು ಪತ್ರ ಕೊಟ್ಟವರಿಗೆ ಜಾರಿ ನಿರ್ದೇಶನಾಲಯ ಶಾಕ್ ನೀಡಿದೆ. ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡ ಮನೆಯ ಮೇಲೆ ದಾಳಿ ಮಾಡಿದಾಗ 30ಕ್ಕೂ ಹೆಚ್ಚು ಸಚಿವರು, ಶಾಸಕರ ಶಿಫಾರಸು ಪತ್ರ ಪತ್ತೆಯಾಗಿದೆ ಎಂದು ಇಡಿ ಅಧಿಕೃತವಾಗಿ ತಿಳಿಸಿತ್ತು. ಮೇಯರ್ ಚುನಾವಣೆ : ಮಾಲ್ಡೀವ್ಸ್ ಆಡಳಿತ ಪಕ್ಷಕ್ಕೆ ಹೀನಾಯ ಸೋಲು – ಭಾರತದ ಪರ ಪಕ್ಷಕ್ಕೆ ಭರ್ಜರಿ ಜಯ
ಈಗ ನೇಮಕಾತಿಯಾದ 10 ಅಭ್ಯರ್ಥಿಗಳಿಗೆ ನೋಟಿಸ್ ನೀಡಿದ್ದು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಇಡಿ ಸೂಚಿಸಿದೆ. ಪ್ರತಿಯೊಬ್ಬ ಅಭ್ಯರ್ಥಿಗಳ ಬಳಿ 20 ರಿಂದ 30 ಲಕ್ಷ ರೂ. ಹಣವನ್ನು ಪಡೆಯಲಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಆಯ್ಕೆಯಾದ ಎಲ್ಲರಿಗೂ ಇಡಿ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸುವ ಸಾಧ್ಯತೆಯಿದೆ.
