
ಸಾಧ್ಯವಾಗುತ್ತದೆ ಎಂದರು.ಶಹಾಬಾದ ಡಿವೈಎಸ್ಪಿ ಉಮೇಶ ಚಿಕ್ಕಮಠ ಮಾತನಾಡಿ, ಅಕ್ರಮ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಬಂದರೇ ತಕ್ಷಣ ಪೊಲೀಸರಿಗೆ ತಿಳಿಸಬೇಕು. ನಿಮ್ಮ ಮಾಹಿತಿ ನಾವು ಗೌಪ್ಯವಾಗಿಡುತ್ತೇವೆ. ಜಾತಿ ಮತ ಪಕ್ಷ ಬೇದ ಮರೆತು ನಾವೆಲ್ಲರೂ ಒಂದೇ ಎಂದು ತಿಳಿದು ಪಟ್ಟಣದ ಸಾರ್ವಜನಿಕರು ಪೊಲೀಸರಿಗೆ ಸಹಕಾರ ನೀಡುತ್ತಿದ್ದೀರಿ ನಿಮ್ಮ ಸಹಕಾರ ಹೀಗೆ ಇರಲಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಸಾರ್ವಜನಿಕರು ಪಟ್ಟಣ, ಗ್ರಾಮಗಳಲ್ಲಿ ನಡೆಯುವ ಅಕ್ರಮ ಸಾರಾಯಿ ಮಾರಾಟ ಸೇರಿದಂತೆ ಅನೇಕ ಅಕ್ರಮ ಚಟುವಟಿಕೆಗಳು ಮತ್ತು ಇತರೆ ಸಮಸ್ಯೆಗಳನ್ನು ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತಂದರು. ಪ್ರತಿಯೊಬ್ಬರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಉತ್ತರ ನೀಡಿ ಪರಿಹರಿಸುವ ಕೆಲಸ ಮಾಡಿದರು.ಸಾರ್ವಜನಿಕರಿಂದ ಅರ್ಜಿ ಅಹವಾಲುಗಳನ್ನು ಸ್ವೀಕರಿಸಿದರು. ಪೊಲೀಸ್ ಸಿಬ್ಬಂದಿಗಳು ಮಾದಕ ವಸ್ತು ಸೇವನೆಯಿಂದಾಗುವ ಹಾಗೂ , ಟ್ರಾಫಿಕ್ ರೂಲ್ಸ್, ಕೋಮು ಸೌಹಾರ್ದತೆ ಹಾಳಾಗದಂತೆ ನೋಡಿಕೊಳ್ಳಲು ಬೀದಿ ನಾಟಕ ಪ್ರದರ್ಶನ ಮಾಡಿದ್ದರು.ಸಿಪಿಐ ಪ್ರಕಾಶ ಯಾತನೂರ ಪ್ರಾಸ್ತವಿಕ ಮಾತನಾಡಿದರು. ತಹಶೀಲ್ದಾರ್ ಉಮಾಕಾಂತ ಹಳ್ಳೆ, ತಾಪಂ ಇಒ ನೀಲಗಂಗಾ ಬಬಲಾದ, ಪಿಎಸ್ ಐಗಳಾದ ಚೇತನ ಕುಮಾರ, ಮಹಾಂತೇಶ ಪಾಟೀಲ್, ಪುರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಆನಂದ್ ಪಾಟೀಲ್ ಸೇರಿದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಸಭೆಯಲ್ಲಿ ಹಾಜರಿದ್ದರು.
