ಉದಯವಾಹಿನಿ,ಬೆಂಗಳೂರು: ಗುತ್ತಿಗೆದಾರರಿಗೆ ಹಣ ಪಾವತಿ ಮಾಡುವುದರಿಂದ ಬಚಾವಾಗಲು ರಾಜ್ಯ ಸರ್ಕಾರ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದ ಆಯೋಗ ರಚಿಸಿದೆ ಎಂಬ ಗುತ್ತಿಗೆದಾರರ ಆಪಾದನೆ ಸರಿ ಇದ್ದಂತಿದೆ ಎಂದು ರಾಜ್ಯ ಹೈಕೋರ್ಟ್ ಕಾಂಗ್ರೆಸ್ ಸರ್ಕಾರಕ್ಕೆ ಛೀಮಾರಿ ಹಾಕಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬಿಜೆಪಿ ಸರ್ಕಾರದ ಮೇಲೆ ಶೇ.40ರಷ್ಟು ಕಮಿಷನ್ ಆಪಾದನೆ ಮಾಡಿ ಸುಳ್ಳು, ಅಪಪ್ರಚಾರದ ಮೂಲಕ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ ಸರ್ಕಾರ ಈಗ ಕಮಿಷನ್ ಕೊಟ್ಟವರಿಗೆ ಮಾತ್ರ ಬಿಲ್ ಕೊಟ್ಟು, ಕಮಿಷನ್ ಕೊಡದವರಿಗೆ ಹಣ ಬಿಡುಗಡೆ ಮಾಡದೆ ತನಿಖಾ ಆಯೋಗದ ಹೆಸರಿನಲ್ಲಿ ಬ್ಲ್ಯಾಕ್ ಮೇಲ್ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ತಮ್ಮ ಮೊದಲ ಅವಧಿಯಲ್ಲಿ ಲೋಕಾಯುಕ್ತ ಸಂಸ್ಥೆಯನ್ನ ದುರ್ಬಲಗೊಳಿಸುವ ಮೂಲಕ ಭ್ರಷ್ಟರನ್ನು ರಕ್ಷಿಸಲು ಹೋಗಿ ಹೈಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿದ್ದ ಸಿಎಂ ಸಿದ್ದರಾಮಯ್ಯಈಗ ಮತ್ತೊಮ್ಮೆ ರಂಗೋಲಿ ಕೆಳಗೆ ತೂರಲು ಹೋಗಿ ನ್ಯಾಯಾಲಯದಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!