ಉದಯವಾಹಿನಿ, ಬೆಂಗಳೂರು: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಅಂಧ ದಂಪತಿ ಸಾವು.
ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಅಂಧ ದಂಪತಿ ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ ನೆಲಮಂಗಲದ ಬಳಿ ನಡೆದಿದೆ.
ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಶ್ರೀಧರ್ (52) ಮತ್ತು ಅರ್ಚನಾ (35) ಎಂದು ಗುರುತಿಸಲಾಗಿದೆ. ಶ್ರೀಧರ್ ಮಾಗಡಿ ಬಳಿಯ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಸವಾರ ವೇಗವಾಗಿ ಹೋಗಿದ್ದರಿಂದ ಅಪಘಾತ ನಡೆದ ಸ್ಥಳದಿಂದ ಸುಮಾರು 100 ಮೀಟರ್ ವರೆಗೆ ಎಳೆದೊಯ್ದು ಬೈಕ್ ಸಮೇತ ಚರಂಡಿಗೆ ಬಿದ್ದಿದ್ದಾನೆ.
