ಉದಯವಾಹಿನಿ, ಮೇಲುಕೋಟೆ: ಶ್ರೀ ಚೆಲುವನಾರಾಯಣ ಸ್ವಾಮಿಯವರ ಪ್ರಥಮ ತೆಪ್ಪೋತ್ಸವ ಬುಧವಾರ ರಾತ್ರಿ ಸಂಭ್ರಮದಿಂದ ನೆರವೇರಿತು ವೈರಮುಡಿ ಬ್ರಹ್ಮೋತ್ಸವಕ್ಕೆ ಪೂರ್ವಭಾವಿಯಾಗಿ ಕಲ್ಯಾಣಿಯಲ್ಲಿ ನಡೆದ ಸ್ವಾಮಿಯ ಜಲವಿಹಾರದ ವೈಭವವನ್ನು ನೂರಾರು ಭಕ್ತರು ಕಣ್ತುಂಬಿಕೊಂಡರು
ಚೆಸ್ಕಾಂ ಇಂಜಿನಿಯರ್ ಸಲಹೆಯಂತೆ ಮೈಸೂರಿನ ಹನಿಎಲೆಕ್ಟ್ರಿಕಲ್ವತಿಯಿಂದ ಕಲ್ಯಾಣಿಗೆ ಸರಳ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು ಪಾಂಡವಪುರ ಖಜಾನೆಯಿಂದ ತಂದ ಅಮೂಲ್ಯ ಮುತ್ತಮುಡಿಯೊಂದಿಗೆ ಚೆಲುವನಾರಾಯಣಸ್ವಾಮಿಯನ್ನು ಅಲಂಕರಿಸಿ ಸಂಜೆ 7ಗಂಟೆಯವೇಳೆಗೆ ಮಹೂರ್ತಪಠಣ ನೆರವೇರಿಸಿ ನಂತರ ತೆಪ್ಪೋತ್ಸವಕ್ಕೆ ಚಾಲನೆ ನೀಡಲಾಯಿತು ಕಲ್ಯಾಣಿಯಲ್ಲಿ ಮೂರು ಪ್ರದಕ್ಷಿಣೆಯೊಂದಿಗೆ ಪ್ರಥಮ ತೆಪ್ಪೋತ್ಸವ ರಾತ್ರಿ 8ಗಂಟೆಗೆ ಮುಕ್ತಾಯವಾಯಿತು.
ಚೆಲುವನಾರಾಯಣಸ್ವಾಮಿ ವೈರಮುಡಿ ಜಾತ್ರಾಮಹೋತ್ಸವದ ಎಲ್ಲಾ ಉತ್ಸವ ಮತ್ತು ವಾಹನೋತ್ಸವಗಳಿಗೆ ವಿಶೇಷವಾದ್ಯತಂಡಗಳ ನಿಯೋಜನೆ ಮಾಡುವ ಸಂಬಂಧ ಅಂದು ಉಪವಿಭಾಗಾಧಿಕಾರಿಗಳಾಗಿದ್ದ ಈಗಿನ ಅಪರಜಿಲ್ಲಾಧಿಕಾರಿಗಳಾದ ಡಾ.ಹೆಚ್.ಎಲ್ ನಾಗರಾಜ್ರವರ ಮಾರ್ಗದರ್ಶನಲ್ಲಿ ಆರಂಭಗೊಂಡ ವಿಶೇಷ ಮಂಗಳವಾದ್ಯ ಕೈಂಕರ್ಯ “ನಾದೋಪಾಸನಸೇವೆ” 9ನೇವರ್ಷಕ್ಕೆ ಪಾದಾರ್ಪಣೆ ಮಾಡಿದ್ದು, ತೆಪ್ಪೋತ್ಸವದಂದು ವಿದ್ವಾನ್ ಆನಂದ್ ಅಭಿಲಾಷ್, ಮತ್ತು ಕುಮಾರ್ ಅಶೋಕ್ ಪುಟ್ಟರಾಜು ನಾದಸ್ವರ ನುಡಿಸಿ ಉತ್ಸವಕ್ಕೆ ಮೆರಗುನೀಡಿದರು ಮಾರ್ಚ 17ರಿಂದ ಮಾರ್ಚ ಮಾ.28ರವರೆಗೆ 14ದಿನಗಳಕಾಲ ನುರಿತ ನಾದಸ್ವರ ಕಲಾವಿದರು ವಿವಿಧ ಉತ್ಸವ, ವಾಹನೋತ್ಸವ, ಅಭಿಷೇಕಗಳಲ್ಲಿ ಮಂಗಳವಾದ್ಯ ನುಡಿಸಲಿದ್ದಾರೆ
ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್ ನಾಗರಾಜ್ರವರ ಮಾರ್ಗದರ್ಶನ ಹಾಗೂ ಪ್ರೋತ್ಸಾಹದಲ್ಲಿ ಅನೂಚಾನ ಸತ್ ಸಂಪ್ರದಾಯವನ್ನು ಕನ್ನಡಸಂಸ್ಕøತಿ ಇಲಾಖೆ ಪ್ರಾಯೋಜಕತ್ವ ಹಾಗೂ ಎಸ್.ಎನ್.ಐ ಸಾಂಸ್ಕøತಿಕ ವೇದಿಕೆ ಸಹಯೋಗದಲ್ಲಿ 2024ರ ವೈರಮುಡಿ ಬ್ರಹ್ಮೋತ್ಸವ ವೇಳೆಯೂ ನಾದೋಪಾಸನ ಸೇವೆ ಮುಂದುವರೆಯಲಿದೆ ತೆಪ್ಪೋತ್ಸವದ ವೇಳೆ ಕಲ್ಯಾಣಿಯಲ್ಲಿ ಅಚ್ಚುಕಟ್ಟಾಗಿ ಶುಚಿತ್ವಕಾಪಾಡುವ ಜೊತೆಗೆ ಸರಳ ದೀಪಾಲಂಕಾರ ಮಾಡಿದ್ದು ಭಕ್ತರಿಗೆ ಮುದನೀಡಿತ್ತು.
