ಉದಯವಾಹಿನಿ, ಹುಬ್ಬಳ್ಳಿ,: ಮೋದಿ ಮೋದಿ ಎಂದು ಹೇಳುವವರ ಕಪ್ಪಾಳಕ್ಕೆ ಹೊಡೆಯಿರಿ ಎಂಬ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮತದಾರರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಮತದಾನ ಮಾಡುವ ಮೂಲಕ ಕಪಾಳ ಮೋಕ್ಷ ಮಾಡುತ್ತಾರೆ ಎನ್ನುವ ಮೂಲಕ ತಿರುಗೇಟು ನೀಡಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು ಸ್ವಲ್ಪ ದಿನ ತಾಳಿ, ಮತಗಳ ಮೂಲಕ ಜನ ಅವರ ಕಪಾಳಕ್ಕೆ ಹೊಡೆಯುತ್ತಾರೆ ಎಂದರು.ಇನ್ನು ಎರಡು ಮೂರು ದಿನಗಳಲ್ಲಿ ನಮ್ಮ ಕ್ಷೇತ್ರದಲ್ಲಿ ರಾಷ್ಟ್ರೀಯ ನಾಯಕರ ಪ್ರವಾಸ ನಿಗದಿ ಆಗತ್ತದೆ ಎಂದು ಅವರು ಹೇಳಿದರು. ಜ್ಯದಲ್ಲಿ ಬಿಜೆಪಿ ಪರವಾದ ವಾತಾವರಣ ಇದೆ. ಎಲ್ಲ ಕಡೆ ಮೋದಿ ಪರ ಅಲೆ ಇದೆ. ಹೀಗಾಗಿ ರಾಜ್ಯದಲ್ಲಿ ಭಿನ್ನಮತ ಶಮನ ಆಗುತ್ತದೆ. ಈಗಾಗಲೇ ಸಂಗಣ್ಣ ಕರಡಿ ಅವರು ಸಮಾಧಾನ ಆಗಿದ್ದಾರೆ. ಅವರು ಧಾರವಾಡದ ನಮ್ಮ ಕ್ಷೇತ್ರಕ್ಕೂ ಪ್ರಚಾರಕ್ಕೆ ಬರುತ್ತಾರೆ ಎಂದರು.
ಜನಾರ್ದನ ರೆಡ್ಡಿ ಪಕ್ಷಕ್ಕೆ ಬಂದಿರುವುದರಿಂದ ಬಲ ಬಂದಿದೆ. ಮೂರ್ನಾಲ್ಕು ಜಿಲ್ಲೆಗಳಲ್ಲಿ ಅವರ ಪ್ರಭಾವ ಇದೆ ಎಂದರು.
ಬಿಜೆಪಿಗೆ ಬಂದರೆ ಎಲ್ಲರೂ ಶುದ್ಧವಾಗ್ತಾರೆ ಎಂಬ ಸಂತೋಷ್ ಲಾಡ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಅದು ಅವರ ಅನುಭವದ ಮಾತು ಎಂದು ಹೇಳುವ ಮೂಲಕ ಲಾಡ್ ಹೇಳಿಕೆಗೆ ಬೊಮ್ಮಾಯಿ ತಿರುಗೇಟು ನೀಡಿದರು. ರಾಜ್ಯ ಸರ್ಕಾರ ಅಧೋಗತಿಗೆ ಗೋಗಿದೆ. ಅದೇ ಕಾರಣಕ್ಕೆ ಸುಪ್ರೀಂ ಕೋರ್ಟ್ಗೆ ಹೋಗುತ್ತಿದ್ದಾರೆ. ಸುಪ್ರೀಂ ಕೋರ್ಟ್ಗೆ ಹೋಗಿರುವುದು ರಾಜಕೀಯ ತಂತ್ರಗಾರಿಕೆ. ಈ ಹಿಂದೆ ಯುಪಿಎ ಕಾಲದಲ್ಲಿ ಎಷ್ಟು ಹಣ ಬಂದಿದೆ. ಎನ್ಡಿಎ ಕಾಲದಲ್ಲಿ ಎಷ್ಟು ಎನ್ಡಿಆರ್ಎಫ್ ಹಣ ಬಂದಿದೆ ಎನ್ನುವುದನ್ನು ಬಹಿರಂಗ ಪಡಿಸಲಿ ಎಂದು ಬೊಮ್ಮಾಯಿ ಸವಾಲ್ ಹಾಕಿದರು.
