ಉದಯವಾಹಿನಿ, ಮೈಸೂರು : ನೀರಿಲ್ಲದೆ ಒಣಗಿದ ಬಾಳೆ, ಮಾಡಿದ ಸಾಲ ತೀರಿಸಲಾಗದೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿಯಲ್ಲಿ ನಡೆದಿದೆ. ನಾಗಭೂಷಣ್(61) ಆತ್ಮಹತ್ಯೆ ಮಾಡಿಕೊಂಡ ರೈತ.

ಒಂದೂವರೆ ಎಕರೆ ಜಮೀನಿನಲ್ಲಿ ಬಾಳೆ ಬೆಳೆದಿದ್ದು, ಕೊಳವೆಬಾವಿಯಲ್ಲಿ ನೀರು ಬಾರದೆ ಇರುವ ಹಿನ್ನಲೆಯಲ್ಲಿ ಕೀಟನಾಶಕ ಸೇವಿಸಿದ್ದಾರೆ. ಕೂಡಲೆ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!