ಉದಯವಾಹಿನಿ,ಬೆಂಗಳೂರು ನಗರ:  ಜಿಲ್ಲೆಯ ಆನೇಕಲ್ ತಾಲೂಕಿನ ಹೀಲಲಿಗೆ ಗ್ರಾಮದಲ್ಲಿ 120 ಅಡಿ ಎತ್ತರದ ತೇರು ನೆಲಕ್ಕುರುಳಿರುವಂತಹ ಘಟನೆ ನಡೆದಿದೆ. ಇತಿಹಾಸ ಪ್ರಸಿದ್ಧ ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ಅವಘಡ ಸಂಭವಿಸಿದೆ. ಹತ್ತಾರು ಗ್ರಾಮಗಳಿಂದ ಮದ್ದೂರಮ್ಮ ಜಾತ್ರೆಗೆ ಎತ್ತುಗಳು, ಟ್ರ್ಯಾಕ್ಟರ್​ಗಳ ಮೂಲಕ ತೇರು ಎಳೆದುಕೊಂಡು ಬರಲಾಗುತ್ತದೆ. ಹೀಲಲಿಗೆ ಗ್ರಾಮದಿಂದ ಹುಸ್ಕೂರಿಗೆ ತೇರು ಬರುತ್ತಿರುವಾಗ ಕಮ್ಮಸಂದ್ರದ ಹೈಪರ್ ಮಾರ್ಕೆಟ್ ತಿರುವಿನಲ್ಲಿ ಎಡಭಾಗಕ್ಕೆ ವಾಲಿಕೊಂಡು ನಿಧಾನವಾಗಿ ತೇರು ನೆಲಕ್ಕೆ ಅಪ್ಪಳಿಸಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.

Leave a Reply

Your email address will not be published. Required fields are marked *

error: Content is protected !!