ಉದಯವಾಹಿನಿ, ಬೆಂಗಳೂರು: ಜೂನ್ ೫ ರ ಸುಮಾರಿಗೆ ಕರ್ನಾಟಕದಲ್ಲಿ ಮುಂಗಾರು ಪ್ರಾರಂಭವಾಗಲಿದೆ ಎಂದು ಇತ್ತೀಚಿನ ಮುನ್ಸೂಚನೆ ಯಲ್ಲಿ ಹವಾಮಾನ ಇಲಾಖೆ ತಿಳಿಸಿದೆ. ಮೇ ೩೧ ರಿಂದ ಕರ್ನಾಟಕದಲ್ಲಿ ಮುಂಗಾರು ಪ್ರಾರಂಭವಾಗಲಿದೆ ಎಂದು ಹವಾಮಾನ ಇಲಾಖೆ ಈ ಹಿಂದೆ ಮುನ್ಸೂಚನೆ ನೀಡಿತ್ತು.
ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರತ್ಯೇಕ ಮತ್ತು ಚದುರಿದ ಮಳೆಯು ಮೇ ೩೧ ರವರೆಗೆ ಮುಂದಿನ ಐದು ದಿನಗಳವರೆಗೆ ಮುಂದುವರಿಯುತ್ತದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.
ಇತ್ತೀಚಿನ ಮುನ್ಸೂಚನೆಯ ಪ್ರಕಾರ, ಕರ್ನಾಟಕವು ಉತ್ತಮ ಮುಂಗಾರು ಋತುವನ್ನು ಅನುಭವಿಸುವ ನಿರೀಕ್ಷೆಯಿದೆ. ಇದು ಕೃಷಿ ಕ್ಷೇತ್ರದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಮತ್ತು ಬರಪೀಡಿತ ಪ್ರದೇಶಗಳಲ್ಲಿ ನೀರಿನ ಕೊರತೆಯನ್ನು ನಿವಾರಿಸುವ ಸಾಧ್ಯತೆಯಿದೆ.
ಈ ವರ್ಷ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಹೆಚ್ಚಿನ ತೀವ್ರತೆಯ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳ ಕರ್ನಾಟಕದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.
ಆದರೆ ಚಂಡಮಾರುತದ ಚಟುವಟಿಕೆಯಿಂದಾಗಿ ಹವಾಮಾನದಲ್ಲಿ ಬದಲಾವಣೆ ಕಂಡುಬಂದರೆ, ಮಾನ್ಸೂನ್ ಇನ್ನೂ ನಾಲ್ಕೈದು ದಿನಗಳು ವಿಳಂಬವಾಗುವ ಸಾಧ್ಯತೆಯಿದೆ. ಕರ್ನಾಟಕ ರಾಜ್ಯಕ್ಕೆ ರೆಮೆಲ್ ಚಂಡಮಾರುತದ ಭೀತಿ ಇಲ್ಲ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ. ಪಶ್ಚಿಮ ಬಂಗಾಳ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಮಾತ್ರ ರೆಮಲ್ ಚಂಡಮಾರುತದ ಅರ್ಭಟ ನಡೆಯಲಿದೆ.

 

Leave a Reply

Your email address will not be published. Required fields are marked *

error: Content is protected !!