ಉದಯವಾಹಿನಿ, ಬೆಂಗಳೂರು: ನಗರದ ಪಕ್ಷದ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಸಿಇಟಿ ಪರೀಕ್ಷೆ ಮುಗಿದು ಸುಮಾರು 42 ದಿನ ಆಗಿದೆ. ಆದರೆ ಇನ್ನೂ ಫಲಿತಾಂಶ ಪ್ರಕಟವಾಗಿಲ್ಲ. ಕೇವಲ ಮೂರು ಗಂಟೆಗಳಲ್ಲಿ ವಿಟಿಯು ಅಂತಹ ಸಂಸ್ಥೆಯು ಆಧುನಿಕ ತಾಂತ್ರಿಕತೆಯನ್ನು ಬಳಸಿಕೊಂಡು ಫಲಿತಾಂಶಗಳನ್ನು ಪ್ರಕಟಿಸುತ್ತಿದೆ.
ಆದರೆ ಸಿಇಟಿ ಪರೀಕ್ಷಾ ಪಲಿತಾಂಶ ಇದುವರೆಗೂ ಪ್ರಕಟಿಸದೆ ಇರುವುದರಿಂದ ದೊಡ್ಡ ಹುನ್ನಾರವಿದೆ. ಈಗಾಗಲೇ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಉನ್ನತ ಶಿಕ್ಷಣ ಇಲಾಖೆ ಅನುಮತಿ ನೀಡಿದೆ ” ಎಂದು ಹೇಳಿದರು.

” ಇದು ಸುಮಾರು ₹3000 ಕೋಟಿ ಹಗರಣವಾಗಿದೆ. 60,000 ಸೀಟುಗಳನ್ನು ಇಂದು ಮಾರಾಟಕ್ಕೆ ಇಡಲಾಗಿದೆ. ಒಂದು ಚೀಟಿಗೆ 3 ಲಕ್ಷದಿಂದ 25 ಲಕ್ಷಗಳವರೆಗೆ ಮಾರಾಟ ಮಾಡುತ್ತಿದ್ದಾರೆ. ಎಷ್ಟೋ ಪೋಷಕರು ತಮ್ಮ ಮಕ್ಕಳಿಗೆ ಸರ್ಕಾರಿ ಸೀಟು ಸಿಗುತ್ತದೋ ಇಲ್ಲವೋ ಎಂದು ನಾಲ್ಕೈದು ಕಾಲೇಜಗಳಿಗೆ ಹೋಗಿ ಅರ್ಜಿ ಹಾಕುತ್ತಿದ್ದಾರೆ, ಒಂದು ಅಪ್ಲಿಕೇಶನ್‌ಗೆ ಸುಮಾರು ₹1200 ವಸೂಲಿ ಮಾಡುತ್ತಿವೆ. ಒಂದು ಖಾಸಗಿ ಕಾಲೇಜಿನಲ್ಲಿ 35,000 ಅರ್ಜಿಗಳನ್ನು ಮಾರಾಟ ಮಾಡಿದೆ, ಒಂದು ಅಪ್ಲಿಕೇಶನ್‌ಗೆ ₹1200 ರೂಪಾಯಿ ಆದರೆ ಸುಮಾರು ₹4.80 ಕೋಟಿ ಅರ್ಜಿಯಿಂದಲೇ ದುಡಿಮೆ ಮಾಡಿದೆ ”

” ಸಿಇಟಿ ಫಲಿತಾಂಶ ಪ್ರಕಟಿಸುವ ಮುನ್ನವೇ ಖಾಸಗಿ ಕಾಲೇಜುಗಳಿಗೆ ಪ್ರವೇಶ ಪ್ರಕ್ರಿಯೆಗೆ ಸರ್ಕಾರ ಅನುಮತಿ ನೀಡಿರುವುದು ಯಾಕೆ? ಲಕ್ಷ ಲಕ್ಷ ಹಣ ಕಟ್ಟಿ ಈಗಾಗಲೇ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆಯಲ್ಲಿ ಉತ್ತಮ ರ್‍ಯಾಂಕಿಂಗ್ ಪಡೆದು, ಸರ್ಕಾರಿ ಹಾಗೂ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಚಿತ ಸೀಟು ಸಿಕ್ಕಿದರೆ, ಪ್ರತಿಯೊಬ್ಬ ಪೋಷಕರು ಕಟ್ಟಿದ್ದ ಲಕ್ಷಾಂತರ ರೂಪಾಯಿಗಳು ವಾಪಸ್ಸು ಬರುವುದಿಲ್ಲ.

Leave a Reply

Your email address will not be published. Required fields are marked *

error: Content is protected !!