ಉದಯವಾಹಿನಿ, ಶಿವಮೊಗ್ಗ: ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದು, ರಾಜ್ಯ ಸರ್ಕಾರ ಪ್ರಕರಣದ ತನಿಖೆಗೆ ಎಸ್‌ಐಟಿ ರಚನೆ ಮಾಡಿದೆ.ಈ ನಡುವೆ ಚಂದ್ರಶೇಖರ್ ಪತ್ನಿ ಕವಿತಾ ಆರೋಗ್ಯದಲ್ಲಿ ಏರುಪೇರಾಗಿದೆ. ವಾಂತಿ ಹಾಗೂ ತೀವ್ರ ಸುಸ್ತಿನಿಂದ ಬಳಲುತ್ತಿರುವ ಅವರನ್ನು ಕುಟುಂಬದವರು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇನ್ನು ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಹಗರಣ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್‌ಐಟಿ, ನಿಗಮದ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದಿದೆ.

Leave a Reply

Your email address will not be published. Required fields are marked *

error: Content is protected !!