ಉದಯವಾಹಿನಿ, ಕಲಬುರಗಿ: 18ನೇ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಇಂದು (ಜೂನ್ 04) ಪ್ರಕಟಗೊಂಡಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇನ್ನೂ ಕಲಬುರಗಿಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಬಿಜೆಪಿಯ ಡಾ.
ಉಮೇಶ್​ ಜಾಧವ್​ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ 2019 ಚುನಾವಣೆ ಸೋಲಿನ ಸೇಡನ್ನು ತೀರಿಸಿಕೊಂಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಗೆಲುವು ಸಾಧಿಸಿರುವ ವಿಚಾರ ಕೇಳಿ ಬಿಜೆಪಿ ನಗರ ಶಕ್ತಿಕೇಂದ್ರದ ಅಧ್ಯಕ್ಷ ಮೂರ್ಛೆ ಹೋಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುಗರಿ ವಿಶ್ವವಿದ್ಯಾಲಯದ ಆವರಣದಲ್ಲಿ ಈ ಘಟನೆ ನಡೆದಿದ್ದು ಅಸ್ವಸ್ಥರನ್ನು ವೀರಣ್ಣ ಯಾರಿ ಎಂದು ಗುರುತಿಸಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!