ಉದಯವಾಹಿನಿ, ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ಪೆನ್ ಡ್ರೈವ್ ಹಂಚಿಕೆಗೆ ಸಂಬಂದಿಸಿದಂತೆ ಆರೋಪಿ ಶರತ್ ಪಾತ್ರದ ಬಗ್ಗೆ ತನಿಖಾ ದಾಖಲೆಗಳನ್ನು ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಕರ್ನಾಟಕ ಸರ್ಕಾರಕ್ಕೆ ಆದೇಶ ಹೊರಡಿಸಿದೆ.
ನವೀನ್ ಗೌಡ ಮತ್ತು ಇತರರ ವಿರುದ್ಧ ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಚುನಾವಣಾ ಏಜೆಂಟ್ ಪೂರ್ಣಚಂದ್ರ ತೇಜಸ್ವಿ ಅವರು ಹಾಸನ ಸಿಇಎನ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ದೂರಿನ ಆಧಾರದ ಮೇಲೆ ತಮ್ಮನ್ನು ಅನಗತ್ಯವಾಗಿ ಪ್ರಕರಣದಲ್ಲಿ ಎಳೆದು ತರಲಾಗಿದೆ ಎಂದು ಶರತ್ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಈ ಆದೇಶ ನೀಡಿದ್ದಾರೆ.
ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್ಐಟಿ) ಆಕ್ಷೇಪಣೆಗಳನ್ನು ಸಲ್ಲಿಸಲು ಮತ್ತು ತನಿಖಾ ದಾಖಲೆಗಳನ್ನು ಪಡೆದುಕೊಂಡು ಜೂನ್ 10 ರಂದು ತನ್ನ ಮುಂದೆ ಸಲ್ಲಿಸುವಂತೆ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಬಿಎನ್ ಜಗದೀಶ ಅವರಿಗೆ ಹೈಕೋರ್ಟ್ ಸೂಚಿಸಿದೆ.
ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣ: ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರಿಗೆ ಜಾಮೀನು!
ತಮ್ಮ ಕಕ್ಷಿದಾರರಿಗೆ ಕಿರುಕುಳ ನೀಡಲಾಗುತ್ತಿದೆ ಮತ್ತು ಮಧ್ಯಂತರ ತಡೆಗೆ ತಡೆ ನೀಡಬಹುದು ಎಂದು ಅರ್ಜಿದಾರರ ಪರ ವಕೀಲರು ಹೇಳಿದಾಗ, ಯಾವುದೇ ಮಧ್ಯಂತರ ಆದೇಶವನ್ನು ನೀಡುವ ಮುನ್ನ ತನಿಖಾ ದಾಖಲೆಗಳನ್ನು ನೋಡಬೇಕು ಎಂದು ನ್ಯಾಯಾಲಯವು ಹೇಳಿದೆ.
