ಉದಯವಾಹಿನಿ, ಹೊಸಕೋಟೆ: ನಗರದಲ್ಲಿ ಅನುಮಾನಾಸ್ಪದವಾಗಿ ತೆಗೆದುಕೊಂಡು ಹೋಗುತ್ತಿದ್ದ ಒಂಟೆಯನ್ನು ಸಾರ್ವಜನಿಕರು ರಕ್ಷಣೆ ಮಾಡಿದ ಘಟನೆ ನಗರದಲ್ಲಿ ಸೋಮವಾರ ನಡೆದಿದೆ.
ಹೊಸಕೋಟೆಯಲ್ಲಿ ಈದ್-ಉಲ್-ಅದಾ ಹಬ್ಬದಂದು ಇಬ್ಬರು ವ್ಯಕ್ತಿಗಳು ಒಂಟೆಯನ್ನು ಹಿಡಿದುಕೊಂಡು ಹೋಗುತ್ತಿದ್ದರು.
ಇದನ್ನು ಗಮನಿಸಿದ ಸಾರ್ವಜನಿಕರು ಒಂಟೆ ಹಾಗೂ ಅದನ್ನು ಹಿಡಿದುಕೊಂಡಿದ್ದ ವ್ಯಕ್ತಿಗಳನ್ನು ತಡೆದು ಪ್ರಶ್ನೆ ಮಾಡಿದ್ದಾರೆ. ಪ್ರಶ್ನೆಗಳಿಗೆ ಉತ್ತರಿಸಲಾಗದೆ ವ್ಯಕ್ತಿಗಳು ಒಂಟಿಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಒಂಟೆಯನ್ನು ದೀನ ದಯ ಗೋವಿನ ಆಶ್ರಮಕ್ಕೆ ನೀಡಿ ರಕ್ಷಣೆ ಮಾಡಲಾಗಿದೆ. ೧೦ ವರ್ಷದ ಒಂಟೆಯನ್ನು ಈದ್-ಉಲ್-ಅದಾ ಹಬ್ಬದ ಹಿನ್ನಲೆಯಲ್ಲಿ ಮಾರಾಟಕ್ಕೆ ತಂದಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!