ಉದಯವಾಹಿನಿ,ತುಮಕೂರು : ತುಮಕೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಆಸ್ತಿಗಾಗಿ ಹೆತ್ತ ತಾಯಿಯನ್ನೇ ಪಾಪಿ ಮಗ ಕೊಂದು ಹಾಕಿದ್ದಾನೆ. ಜಿಲ್ಲೆಯ ಪಾವಗಡದ ಮಾಚಮಾರನಹಳ್ಳಿಯಲ್ಲಿ ಈ ಘಟನೆ ನಡೆದಿದೆ.
ಕೊಲೆಯಾದ ಮಹಿಳೆಯನ್ನು ಗ್ರಾಮದ ಚಂದ್ರಕ್ಕ (50) ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಮಹಿಳೆಯ ಮಗ ಆಂಜನೇಯಲು ಹಾಗೂ ಆತನ ಭಾವ ಪ್ರಭಾಕರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಮಹಿಳೆಯನ್ನು ಜಮೀನಿನಲ್ಲಿ ಕತ್ತು ಕೊಯ್ದು ಕೊಲೆ ಮಾಡಲಾಗಿತ್ತು, ಬಳಿಕ ಡ್ರಾಮಾ ಮಾಡಿದ ಮಗ ತನ್ನ ತಾಯಿಯನ್ನು ಕೊಲೆ ಮಾಡಿದವರನ್ನು ಬಂಧಿಸಿ ಎಂದು ಪಾವಗಡ ಪೊಲೀಸ್ ಠಾಣೆ ಮೆಟ್ಟಿಲೇರಿದ್ದನು. ನಂತರ ಪೊಲೀಸರಿಗೆ ಅನುಮಾನ ಬಂದು ತನಿಖೆ ನಡೆಸಿದಾಗ ಮಗ ಆಂಜನೇಯಲುನೇ ಕೊಲೆ ಮಾಡಿರುವುದು ಧೃಡವಾಗಿದೆ. ಮೃತ ಮಹಿಳೆ ತನ್ನ ಹೆಸರಿನಲ್ಲಿದ್ದ 5 ಎಕರೆ ಜಮೀನನ್ನು ಮಗಳ ಹೆಸರಿಗೆ ವರ್ಗಾಯಿಸುವುದಾಗಿ ಹೇಳಿದ್ದಳು, ಇದರಿಂದ ತಾಯಿ ಹಾಗೂ ಮಗನ ನಡುವೆ ಗಲಾಟೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!