ಉದಯವಾಹಿನಿ, ಬೆಂಗಳೂರು: ಬೆಂಗಳೂರು: ದೇವರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಗಂಗಾಧರ ಅಜ್ಜಯನ ಹೆಸರಿನಲ್ಲಿ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ ಬಳಿಕ, 8 ಮಂದಿ ಶಾಸಕರ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.ಸಿಎಂ, ಡಿಸಿಎಂ ಪ್ರಮಾಣವಚನದ ಬಳಿಕ ಕೊರಟಗೆರೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಂತ ಡಾ.ಜಿ ಪರಮೇಶ್ವರ್ ಅವರು ಸಂವಿಧಾನದ ಹೆಸರಿನಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಇವರ ಬಳಿಕ ಕೆಹೆಚ್ ಮುನಿಯಪ್ಪ ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ಬಳಿಕ ಕೆಜೆ ಜಾರ್ಜ್ ಅವರು ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರೇ, ಶಾಸಕ ಎಂ.ಬಿ ಪಾಟೀಲ್ ಅವರು ಕೂಡ ದೇವರ ಹೆಸರಿನಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.ಬುದ್ಧ ಬಸವನ ಹೆಸರಿನಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಅವರು ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಶಾಸಕ ಪ್ರಿಯಾಂಕ್ ಖರ್ಗೆ ಅವರು ದೇವರ ಹೆಸರಿನಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಇವರು 2016ರಲ್ಲಿ ಐಟಿ ಮತ್ತು ಬಿಟಿ ಸಚಿವರಾಗಿದ್ದರು. ಕೆಪಿಸಿಸಿ ಸಂವಹ ವಿಭಾಗದ ಮುಖ್ಯಸ್ಥರಾಗಿಯೂ ಕಾರ್ಯ ನಿರ್ವಹಿಸಿದ್ದರು.1985ರಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ, 1989ರಲ್ಲಿ ಜಯನಗರ ಕ್ಷೇತ್ರದಲ್ಲಿ ನಾಲ್ಕು ಬಾರಿ ಶಾಸಕರಾಗಿ, ಬಿಟಿಎಂ ಲೇಔಟ್ ಕ್ಷೇತ್ರದಿಂದ ನಾಲ್ಕುಬಾರಿಯಾಗಿ ಶಾಸಕರಾಗಿ ಆಯ್ಕೆಯಾಗಿದ್ದಂತ ರಾಮಲಿಂಗಾರೆಡ್ಡಿಯವರು ಇಂದು ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.ಈ ಬಳಿಕ ಚಾಮರಾಜಪೇಟೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಂತ ಜಮೀರ್ ಅಹ್ಮದ್ ಖಾನ್ ಅವರು ಅಲ್ಲಾ ಹಾಗೂ ತಾಯಿಯ ಹೆಸರಿನಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

Leave a Reply

Your email address will not be published. Required fields are marked *

error: Content is protected !!