ಉದಯವಾಹಿನಿ, ಬೆಂಗಳೂರು: ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟಗಳನ್ನು ಆಲಿಸಬೇಕು ಹಾಗೂ ಅಗತ್ಯ ನೆರವುಗಳನ್ನು ಒದಗಿಸಿಕೊಡಬೇಕು ಎಂದು ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮನವಿ ಮಾಡಿದ್ದಾರೆ.ರಾಜ್ಯದಲ್ಲಿ ಈ ವರ್ಷ ಭಾರಿ ಮಳೆಯಾಗುತ್ತಿದೆ ಮತ್ತು ಪ್ರವಾಹದಿಂದ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿ ನೀರಿನ ಹೊರಹರಿವು ಹೆಚ್ಚಾದ ಪರಿಣಾಮ ನೆರೆ ಪರಿಸ್ಥಿತಿ ಎದುರಾಗಿದೆ. ನದಿ ಪಾತ್ರದ ಜನ, ಜಾನುವಾರು, ಆಸ್ತಿ, ಬೆಳೆಗಳಿಗೆ ಹಾನಿಗಳ ಬಗ್ಗೆ ವರದಿಯಾಗುತ್ತಿದೆ.
ಇಂತಹ ಕಷ್ಟದ ಸಮಯದಲ್ಲಿ ಜನರ ಜೊತೆ ನಿಲ್ಲಬೇಕಿರುವುದು ನಮ ಸರ್ಕಾರದ ಕರ್ತವ್ಯ. ಹೀಗಾಗಿ ಸಚಿವ ಸಹೋದ್ಯೋಗಿಗಳು ತಮ ಕ್ಷೇತ್ರ ವ್ಯಾಪ್ತಿಯ ಹಾಗೂ ಇತರ ಪ್ರವಾಹಪೀಡಿತ ಪ್ರದೇಶಗಳ ಶಾಸಕರ ಸಂಪರ್ಕದೊಂದಿಗೆ ಭೇಟಿ ಕೊಟ್ಟು,  ಸಂತ್ರಸ್ತರ ಅಹವಾಲುಗಳನ್ನು ಸ್ವೀಕರಿಸಿ ಅವರ ನೆರವಿಗೆ ಧಾವಿಸಬೇಕಾಗಿ ಕೋರುತ್ತೇನೆ ಎಂದು ಮನವಿ ಮಾಡಿದ್ದಾರೆ.
ವರುಣನ ಕೃಪೆಯಿಂದ ಉತ್ತಮ ಮಳೆಯಾಗುತ್ತಿದೆ. ಇದೇ ವೇಳೆ ಉಂಟಾಗಿರುವ ಅವಘಡಗಳಿಂದ ಜನರು ಆತಂಕಕ್ಕೆ ಒಳಗಾಗಿದ್ದು, ಜನಪ್ರತಿನಿಧಿಗಳಾದ ನಾವು ಅವರ ಜೊತೆ ನಿಲ್ಲೋಣ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!