ಉದಯವಾಹಿನಿ, ಬೆಳಗಾವಿ : ಅತಿವೃಷ್ಟಿ ಹಾಗೂ ನದಿಯ ಹಿನ್ನೀರು ಮನೆಗಳಿಗೆ ನುಗ್ಗಿರುವ ಹಿನ್ನೆಲೆಯಲ್ಲಿ ಗೋಕಾಕ ನಗರದ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಗೊಂಡಿರುವ ಕುಟುಂಬಸ್ಥರನ್ನು ಖುದ್ದಾಗಿ ಭೇಟಿ ಮಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಸಂತ್ರಸ್ತರಿಗೆ ಸಂಪರ್ಣ ನೆರವು ಕಲ್ಪಿಸುವ ಭರವಸೆ ನೀಡಿದರು.
ಕಾಳಜಿ ಕೇಂದ್ರಗಳಲ್ಲಿ ಕಲ್ಪಿಸಲಾಗಿರುವ ಊಟೋಪಹಾರ ಮತ್ತಿತರ ಮೂಲಸೌರ್ಯಗಳನ್ನು ಪರಿಶೀಲಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸ್ವತಃ ಗೋಕಾಕ ನಗರದ ಸರಕಾರಿ ಮುನ್ಸಿಪಲ್ ಪದವಿಪರ್ವ ಕಾಲೇಜಿನಲ್ಲಿ ಆರಂಭಿಸಲಾಗಿರುವ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂರ್ಭದಲ್ಲಿ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಸಂತ್ರಸ್ತರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳು, ಸರಕಾರವು ಸಂತ್ರಸ್ತರಿಗೆ ಎಲ್ಲ ರೀತಿಯ ನೆರವು ನೀಡುತ್ತಿದ್ದು, ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬಾರದು ಎಂದು ಹೇಳಿದರು.
ಕಾಳಜಿ ಕೇಂದ್ರದಲ್ಲಿರುವ ಎಲ್ಲರಿಗೂ ಉತ್ತಮಗುಣಮಟ್ಟದ ಊಟೋಪಹಾರ ವ್ಯವಸ್ಥೆ ಕಲ್ಪಿಸಲಾಗಿದ್ದು, ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಕೂಡ ಒದಗಿಸಲಾಗಿರುತ್ತದೆ.
ನದಿತೀರದ ಕೆಲವು ಗ್ರಾಮಸ್ಥರು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಗೊಳ್ಳಲು ನಿರಾಕರಿಸುತ್ತಿರುವ ಬಗ್ಗೆ ಪ್ರಸ್ತಾಪಿಸಿದ ಅವರು, ಪ್ರತಿಯೊಬ್ಬರ ಜೀವ ಅಮೂಲ್ಯವಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಕಾಳಜಿ ಕೇಂದ್ರ ಅಥವಾ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಮನವಿ ಮಾಡಿಕೊಂಡರು. ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದುಕೊಂಡಿದ್ದ ತುಂಬು ರ್ಭಿಣಿಯೊಬ್ಬರನ್ನು ಮಾತನಾಡಿಸಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಕೂಡಲೇ ಆಸ್ಪತ್ರೆಗೆ ದಾಖಲಾಗುವಂತೆ ತಿಳಿಸಿದರು. ಇದಾದ ಬಳಿಕ ಗೊಡಚಿನಮಲ್ಕಿ ಜಲಪಾತ ಪ್ರದೇಶವನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ನೀರಿನಹರಿವು ಹೆಚ್ಚಾಗಿರುವುದರಿಂದ ಅಗತ್ಯ ಎಚ್ಚರಿಕೆ ವಹಿಸುವಂತೆ ಪೊಲೀಸ್ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗೆ ನರ್ದೇಶನ ನೀಡಿದರು.ಗೋಕಾಕ ತಹಶೀಲ್ದಾರ ಮೋಹನ ಭಸ್ಮೆ, ನೋಡಲ್ ಅಧಿಕಾರಿ ಬಸವರಾಜ ಕುರಿಹುಲಿ ಮತ್ತಿತರರು ಈ ಸಂರ್ಭದಲ್ಲಿ ಉಪಸ್ಥಿತರಿದ್ದರು.
