ಉದಯವಾಹಿನಿ, ಬ್ಯಾಡಗಿ: ತಾಲ್ಲೂಕಿನ ಆಣೂರು ಗ್ರಾಮದ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಹಸುವಿನ ಮೇಲೆ ಗುರುವಾರ ಚಿರತೆ ದಾಳಿ ಮಾಡಿರುವುದಾಗಿ ಗೊತ್ತಾಗಿದೆ. ತೀವ್ರ ಗಾಯಗೊಂಡಿದ್ದ ಹಸು ಸ್ಥಳದಲ್ಲಿಯೇ ಮೃತಪಟ್ಟಿದೆ.
ಚಿರತೆ ದಾಳಿ ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದೆ.ರೈತರು ಹೊಲಗಳಿಗೆ ತೆರಳಲು ಭಯಪಡುತ್ತಿದ್ದಾರೆ.
ಚಂದ್ರಪ್ಪ ಗಾಣಗೇರ ಅವರಿಗೆ ಸೇರಿದ್ದ ಹಸು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ದನಗಾಯಿಗಳು ಎಂದಿನಂತೆ ಹಸುಗಳನ್ನು ಮೇಯಿಸಲು ತೆರಳಿದ್ದಾಗ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!